ಬ್ರೇಕಿಂಗ್ ನ್ಯೂಸ್
25-09-23 05:22 pm Mangalore Correspondent ಕರಾವಳಿ
ಉಳ್ಳಾಲ, ಸೆ.25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದ್ದು, ಛಿದ್ರಗೊಂಡ ಮೃತದೇಹ ರೈಲಿನಡಿಯಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ರೈಲನ್ನು ನಿಲ್ಲಿಸಿ ಹೊರ ತೆಗೆಯಲಾಗಿದೆ.
ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ಆದಿತ್ಯವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದುಕೊಂಡು ಹೋಗಿ ರೈಲಿನಡಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಪಾನಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

ತುರ್ತು ನಿಲುಗಡೆಯಾದ ರೈಲು!
ಆದಿತ್ಯವಾರ ರಾತ್ರಿ 8.15 ರ ಸುಮಾರಿಗೆ ಘಟನೆ ನಡೆದಿದೆ. ಪೋರ್ ಬಂದರ್ - ಕೊಚ್ಚುವೆಲಿ ನಡುವೆ ಸಂಚರಿಸುವ ರೈಲಿನಡಿಗೆ ಬಿದ್ದು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಸೋಮೇಶ್ವರ, ಉಚ್ಚಿಲ ಗೇಟ್ ದಾಟುತ್ತಿದ್ದಂತೆ ಬೋಗಿಯಡಿ ಶಬ್ದ ಕೇಳಿಬಂದಿದ್ದು, ದುರ್ವಾಸನೆ ಇರುವುದನ್ನು ಗಮನಿಸಿದ ಉಚ್ಚಿಲ ಸ್ಟೇಷನ್ ಮಾಸ್ಟರ್, ತಕ್ಷಣ ರೈಲಿನ ಲೋಕೊ ಪೈಲೆಟ್ ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಉಚ್ಚಿಲ ಗೇಟ್ ನಿಂದ 2 ಕಿಮೀ ದೂರ ಚಲಿಸಿದ್ದ ರೈಲಿನಡಿ ಛಿದ್ರಗೊಂಡ ಮೃತದೇಹ ಸಿಲುಕಿಕೊಂಡಿತ್ತು. ತಕ್ಷಣ ಲೋಕೊಪೈಲಟ್ ರೈಲನ್ನ ತುರ್ತಾಗಿ ನಿಲ್ಲಿಸಿದ್ದಾರೆ. ಬೋಗಿಗಳಡಿ ಛಿದ್ರವಾಗಿ ಚಕ್ರಗಳಿಗೆ ಸಿಲುಕಿದ್ದ ಮೃತದೇಹದ ಮಾಂಸ ಖಂಡಗಳನ್ನ ಕ್ಷಿಪ್ರವಾಗಿ ತೆರವುಗೊಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ರೈಲು ಸುಗಮ ಸಂಚಾರಕ್ಕೆ ರೈಲ್ವೇ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
44 year old commits suicide by falling to speeding train at Ullal in Mangalore, train stopped to remove body pieces. The deceased has been identified as Prashanth from Konchady.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm