ಬ್ರೇಕಿಂಗ್ ನ್ಯೂಸ್
25-09-23 06:17 pm Mangalore Correspondent ಕರಾವಳಿ
ಮಂಗಳೂರು, ಸೆ.25: ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಮುಸ್ಲಿಮ್ ವ್ಯಾಪಾರಸ್ಥರೇ ಪ್ರಭಾವಿಗಳಿದ್ದಾರೆ. ಹಿಂದಿನಿಂದಲೂ ಹಿಂದು- ಮುಸ್ಲಿಮರು ಒಗ್ಗಟ್ಟಿನಿಂದಲೇ ವಹಿವಾಟು ಮಾಡಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ಮಾತ್ರ ಈದ್ ಮಿಲಾದ್ ಹೆಸರಲ್ಲಿ ಕಡ್ಡಾಯ ರಜೆಯ ಬ್ಯಾನರ್ ಹಾಕಿರುವುದು ವಿವಾದಕ್ಕೆ ಗುರಿಯಾಗಿದೆ.
ಆಳಸಮುದ್ರ ಮೀನುಗಾರಿಕೆ ಬಳಿಕ ದಕ್ಕೆಗೆ ಬರುವ ಬೋಟ್ ಗಳಿಂದ ಮೀನುಗಳನ್ನು ಇಳಿಸಿದಲ್ಲಿ ಅವನ್ನು ಖರೀದಿಸುವುದು ವ್ಯಾಪಾರಿಗಳು. ಇವರು ಏಲಂ ಮಾಡಿ ಮೀನುಗಳನ್ನು ಅಗಾಧ ಪ್ರಮಾಣದಲ್ಲಿ ಖರೀದಿಸಿ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಮತ್ತು ಹೊರ ಪ್ರದೇಶಗಳಿಗೆ ಪೂರೈಕೆ ಮಾಡುತ್ತಾರೆ. ಇಂತಹ ದೊಡ್ಡ ವ್ಯಾಪಾರಿಗಳಲ್ಲಿ ಮುಸ್ಲಿಮರದ್ದೇ ಪ್ರಾಬಲ್ಯ. ಸದ್ಯ ಇಂತಹ 25 ವ್ಯಾಪಾರಿಗಳಿದ್ದು, ಈ ಪೈಕಿ ಇಬ್ಬರಷ್ಟೇ ಹಿಂದುಗಳಿದ್ದಾರಂತೆ. ಇತ್ತೀಚಿನ ವರ್ಷಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಪ್ರಭಾವ ಹೆಚ್ಚಿದ್ದರಿಂದ ದಕ್ಕೆಯಲ್ಲಿ ಅವರದೇ ಕಾರುಬಾರು ಎನ್ನುತ್ತಾರೆ, ಬೋಟ್ ಮಾಲೀಕರು.

ಹಾಗೆಂದು, ದಕ್ಕೆಯಲ್ಲಿ ಮತದ ಹೆಸರಲ್ಲಿ ಭೇದ ಇರಲಿಲ್ಲ. ಹಿಂದು, ಮುಸ್ಲಿಮರ ಹಬ್ಬಗಳ ದಿನದಂದು ಸ್ವಯಂಪ್ರೇರಿತ ರಜೆ ಘೋಷಿಸಿಕೊಂಡು ಸೌಹಾರ್ದ ವಾತಾವರಣ ಇದೆ. ಈ ಬಾರಿ ಸೆ.28ರ ಈದ್ ಮಿಲಾದ್ ದಿನದ ಹೆಸರಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಹಿಂದುಗಳನ್ನೇ ಟಾರ್ಗೆಟ್ ಮಾಡಿದ್ದಾಗಿ ಹಿಂದು ಸಂಘಟನೆಗಳು ಆಕ್ರೋಶ ಎಬ್ಬಿಸಿವೆ. ಇದಕ್ಕೆ ಕಾರಣವಾಗಿರುವುದು ಬ್ಯಾನರಿನಲ್ಲಿ ಹಾಕಿದ್ದ ಅಂಶಗಳು. ಸೆ.28ರ ಈದ್ ದಿನದಂದು ಬೆಳಗ್ಗೆ 3.45ರಿಂದಲೇ ರಜೆ ಇದ್ದು, ಯಾರು ಕೂಡ ಮೀನು ವ್ಯಾಪಾರ ಮಾಡಬಾರದು. ದಕ್ಕೆಯಲ್ಲಿ ವ್ಯಾಪಾರ ಮಾಡಿದರೆ, ಅಂಥವರನ್ನು ಒಂದು ತಿಂಗಳ ಕಾಲ ಬಹಿಷ್ಕರಿಸಲಾಗುವುದು. ಅಲ್ಲದೆ, ದಂಡನೆ ವಿಧಿಸಲಾಗುವುದು ಎಂದು ಬ್ಯಾನರ್ ಹಾಕಲಾಗಿದೆ.
ಈ ಬಗ್ಗೆ ಅಲ್ಲಿನ ವ್ಯಾಪಾರಿಗಳಲ್ಲಿ ಮಾಹಿತಿ ಕೇಳಿದಾಗ, ನಮ್ಮಲ್ಲಿ ಭೇದ ಇಲ್ಲ. ಹಿಂದಿನಿಂದಲೂ ಹಿಂದು – ಮುಸ್ಲಿಮರ ತಲಾ ನಾಲ್ಕು ಹಬ್ಬಗಳಿಗೆ ರಜೆ ಇದೆ. ಕ್ರಿಸ್ಮಸ್ ಸೇರಿ ಕ್ರೈಸ್ತರ ಮೂರು ಹಬ್ಬಗಳ ದಿನದಂದೂ ರಜೆ ಇದೆ. ಇವೆಲ್ಲ ಅಲಿಖಿತ ನಿಮಯದಂತೆ ನಡೆದುಕೊಂಡು ಬಂದಿದೆ. ರಜೆ ಇದ್ದ ದಿವಸ ಬೋಟಿನಿಂದ ಮೀನು ಇಳಿಸುವುದಾಗಲೀ, ದಕ್ಕೆಯಲ್ಲಿ ಮೀನು ವ್ಯಾಪಾರ ಆಗಲೀ ಇರುವುದಿಲ್ಲ. ಮೊನ್ನೆ ಗಣೇಶೋತ್ಸವ ದಿನ ರಜೆ ಇದ್ದರೂ, ನಸುಕಿನ 3 ಗಂಟೆ ವೇಳೆಗೆ ಒಂದಿಬ್ಬರು ಪರ್ಸೀನ್ ಬೋಟಿನಿಂದ ಮೀನು ಖರೀದಿಸಿ, ಮಾರಾಟ ಮಾಡಿದ್ದಾರೆ. ಇದು ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದರಿಂದ ಬ್ಯಾನರ್ ಹಾಕಲಾಗಿದೆ. ರಜೆಯಂದ್ರೆ 6 ಗಂಟೆಯಿಂದ 6 ಗಂಟೆ ವರೆಗೆ ಅಲ್ಲ. ಬೆಳಗ್ಗೆ 3.45ಕ್ಕೇ ಶುರುವಾಗುತ್ತದೆ ಎಂಬುದನ್ನು ತಿಳಿಸಲು ಬ್ಯಾನರ್ ಹಾಕಿದ್ದೇವೆ ಎಂದಿದ್ದಾರೆ.
ಆದರೆ ಈ ರೀತಿ ಹಿಂದೆ ಯಾವತ್ತೂ ಬ್ಯಾನರ್ ಹಾಕಿದ್ದಿಲ್ಲ. ಮುಸ್ಲಿಂ ಡಾಮಿನೇಟ್ ಇರುವ ವ್ಯಾಪಾರಸ್ಥರ ಸಂಘವು ಮುಸ್ಲಿಮರ ಹಬ್ಬಕ್ಕೆ ಕಡ್ಡಾಯ ರಜೆಯ ಬ್ಯಾನರ್ ಹಾಕಿರುವುದು ಹಿಂದುಗಳ ಕಣ್ಣಲ್ಲಿ ತಮ್ಮನ್ನು ಗುರಿ ಮಾಡಲಾಗಿದೆ ಎನ್ನುವಂತೆ ಕಂಡಿದೆ. ಅಲ್ಲದೆ, ಕಾನೂನು ಉಲ್ಲಂಘಿಸಿ ವ್ಯಾಪಾರ ಮಾಡಿದರೆ, ಅಂಥವರನ್ನು ಬಹಿಷ್ಕರಿಸುವುದು ಸೇರಿದಂತೆ ದಂಡನೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದು ಹಿಂದು ಸಂಘಟನೆಗಳನ್ನು ಕೆರಳಿಸಿದೆ. ಹಿಂದು ವ್ಯಾಪಾರಸ್ಥರಿಗೆ ಬಹಿಷ್ಕಾರ ಹಾಕೋದಕ್ಕೆ ಇಲ್ಲೇನು ಷರೀಯತ್ ಕಾನೂನು ಇದೆಯಾ ಎಂದು ಹಿಂದು ಮುಖಂಡರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ದಕ್ಕೆಯ ಹಿಂದು ವ್ಯಾಪಾರಸ್ಥರಲ್ಲಿ ಕೇಳಿದರೆ, ಮುಸ್ಲಿಮರು ಮುಸ್ಲಿಮರಿಗಾಗಿಯೇ ಅದನ್ನು ಹಾಕಿರೋದು, ತಮಗಲ್ಲ. ಅವರದೇ ವ್ಯಾಪಾರಸ್ಥರು ಹೆಚ್ಚಿರೋದು. ನಾವು ಒಂದಿಬ್ಬರಿದ್ದು ಬ್ಯಾನರ್ ನಮ್ಮನ್ನು ಟಾರ್ಗೆಟ್ ಮಾಡಿಲ್ಲ ಅಂತಿದ್ದಾರೆ.
Eid Milad 2023 banner row in Mangalore, Holiday is only for Muslim traders not for Hindus.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm