ಬ್ರೇಕಿಂಗ್ ನ್ಯೂಸ್
26-09-23 02:24 pm Mangalore Correspondent ಕರಾವಳಿ
ಮಂಗಳೂರು, ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.
ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
One arrested by Mangalore Kankandy Town Police for misbehaving inappropriately with Indiana Hospital Customer staff. The arrested has been identified as Ashik.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm