ಬ್ರೇಕಿಂಗ್ ನ್ಯೂಸ್
27-09-23 12:31 pm Mangalore Correspondent ಕರಾವಳಿ
ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.
Tempo driver commits suicide by jumping to well at Olapete at Thokottu in Mangalore. The Deceased has been identified as Nagesh (62).
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm