ಬ್ರೇಕಿಂಗ್ ನ್ಯೂಸ್
27-09-23 12:57 pm Mangalore Correspondent ಕರಾವಳಿ
ಮಂಗಳೂರು, ಸೆ.27: ಬಸ್ ನಿಲ್ಲಿಸಿಲ್ಲ ಎಂದು ಕಂಡಕ್ಟರ್ ಮೇಲೆ ಯುವಕರ ತಂಡ ಹಲ್ಲೆಗೈದಿದ್ದಾರೆಂದು ಆರೋಪಿಸಿ ಅಡ್ಯಾರ್- ಕಣ್ಣೂರಿನಲ್ಲಿ ಬಸ್ ಚಾಲಕರು, ಮಾಲಕರು ಖಾಸಗಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಸಂಜೆ ಹಲ್ಲೆ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಆ ರೂಟಿನಲ್ಲಿ ಬಸ್ ಗಳನ್ನು ತಡೆದು ಸಿಬಂದಿಯೇ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಎರಡೂ ಕಡೆಯವರು ದೂರು ನೀಡಿದ್ದಾರೆ. ಅಡ್ಯಾರ್ ಕಣ್ಣೂರು ನಿವಾಸಿ ಅಬ್ದುಲ್ ಖಾದರ್ ಎಂಬವರು ಸಂಜೆ ವೇಳೆಗೆ ಎಸ್.ಕೆ. ಟ್ರಾವೆಲ್ಸ್ ಎಂಬ ಖಾಸಗಿ ಬಸ್ಸಿನಲ್ಲಿ ಬಂದಿದ್ದರು. ಕಣ್ಣೂರು ಸ್ಟಾಪ್ ನಲ್ಲಿ ಇಳಿಯಲಿದೆ, ಬಸ್ ನಿಲ್ಲಿಸುವಂತೆ ಹೇಳಿದರೂ, ಬಸ್ ಸಿಬಂದಿ ಮುಂದಕ್ಕೆ ಒಯ್ದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತಿಗೆ ಮಾತು ಬೆಳೆದಿದ್ದು ಬಸ್ ನಿರ್ವಾಹಕನೇ ತನ್ನ ಮೇಲೆ ಹಲ್ಲೆಗೈದಿದ್ದಾನೆಂದು ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಬಸ್ ನಿರ್ವಾಹಕ ಯಶವಂತ್ ಮೇಲೆ ಅಬ್ದುಲ್ ಖಾದರ್ ಮತ್ತು ಅವರ ಸಹವರ್ತಿ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ ಎನ್ನುವ ದೂರು ಸಿಬಂದಿ ಕಡೆಯದ್ದು.


ಬಸ್ ನಿರ್ವಾಹಕ ಯಶವಂತ್ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಖಂಡಿಸಿ ಖಾಸಗಿ ಬಸ್ಸಿನ ಸಿಬಂದಿ ಸೇರಿ ಇಂದು ಅಡ್ಯಾರ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಡ್ಯಾರ್, ಕಣ್ಣೂರಿನಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ನಡೆಸದಂತೆ ಸಿಬಂದಿಯನ್ನು ಚದುರಿಸಿದ್ದಾರೆ. ಟೈಮಿಂಗ್ ಕಾರಣಕ್ಕೆ ಬಸ್ ನಿಲ್ಲಿಸಲು ಆಗಿರಲಿಲ್ಲ. ಅದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಿಬಂದಿ ಹೇಳುತ್ತಿದ್ದಾರೆ. ಹೀಗಾಗಿ ಖಾಸಗಿ ಬಸ್ ಗಳ ಅವಾಂತರಕ್ಕೆ ಕಾರಣವಾಗಿರುವ ಟೈಮಿಂಗ್ ಪದ್ಧತಿಯನ್ನೇ ಕೈಬಿಡಬೇಕೆಂದು ಸಿಬಂದಿ ಒತ್ತಾಯಿಸಿದ್ದಾರೆ.
Passneger assults bus conductor over trival issue at Kannur in Mangalore, Protest held. A counter case has been registered at Kankandy Town Police Station.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm