ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm