ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm