ಬ್ರೇಕಿಂಗ್ ನ್ಯೂಸ್
28-09-23 12:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳೇ ಹೆಚ್ಚಿದ್ದು ಬಸ್ ಮಾಲಕರ ಸಂಘ ಬಂದ್ ಕರೆಗೆ ಬೆಂಬಲ ನೀಡಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ಇನ್ನಿತರ ಪರೀಕ್ಷೆ ಆಗುತ್ತಾ ಇದೆ. ಹಿಂದೆ ಕನ್ನಡ ಪರ ಸಂಘಟನೆಗಳು ನಮ್ಮ ಬಂದ್ ಕರೆಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಕಾವೇರಿ ಬಂದ್ ಕರೆಗೆ ನಾವು ನೈತಿಕ ಬೆಂಬಲ ನೀಡುತ್ತೇವೆ. ಆದರೆ ಬಂದ್ ಅಥವಾ ಪ್ರತಿಭಟನೆಗಿಳಿಯೋದಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುವ ರೀತಿ ಮಾಡಲ್ಲ. ಎಂದಿನಂತೆ ಖಾಸಗಿ ಬಸ್ ಗಳು ಓಡಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಸಿಟಿ ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್ ರಾಜ್ ಆಳ್ವ ಪ್ರತಿಕ್ರಿಯಿಸಿ, ನಾವು ಈ ಹಿಂದೆ ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೆವು. ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ನಮಗೆ ಬೆಂಬಲ ನೀಡಿರಲಿಲ್ಲ. ತುಳು ಭಾಷೆಯ ವಿಚಾರದಲ್ಲಿಯೂ ಘಟ್ಟದ ಭಾಗದ ಶಾಸಕರಾಗಲೀ, ಕನ್ನಡ ಸಂಘಟನೆಗಳಾಗಲೀ ನಮಗೆ ಬೆಂಬಲ ನೀಡುತ್ತಿಲ್ಲ. ಇದಕ್ಕಾಗಿ ನಾವೀಗ ಕನ್ನಡ ಸಂಘಟನೆಗಳ ಬಂದ್ ಕರೆಗೆ ಸ್ಪಂದನೆ ನೀಡುವುದಿಲ್ಲ ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದ್ದು, ಬಂದ್ ಕರೆಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅಲ್ಲಿನ ಬಸ್ ಮಾಲಕರು ತಿಳಿಸಿದ್ದಾರೆ.
Karnataka Bandh over Cauvery Row, Mangalore buses to move as normal, no support by Mangaloreans.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm