ಬ್ರೇಕಿಂಗ್ ನ್ಯೂಸ್
29-09-23 05:01 pm Mangalore Correspondent ಕರಾವಳಿ
ಪುತ್ತೂರು, ಸೆ.29: ಕಾಂಗ್ರೆಸ್ ಮುಖಂಡ ಕುದ್ಕಾಡಿ ಗುರುಪ್ರಸಾದ್ ರೈ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆಗೈದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಆರು ಮಂದಿಯನ್ನು ಬಂಧಿಸಿದ್ದಾರೆ. ಘಟನೆ ನಡೆಯೋದಕ್ಕೂ ಕೆಲವು ದಿನಗಳ ಹಿಂದೆ ಸಂಬಂಧಿಕರನ್ನು ಕರೆತಂದಿದ್ದ ಕಾರು ಚಾಲಕನೇ ಕೃತ್ಯದ ಸೂತ್ರಧಾರಿ ಎನ್ನುವ ಮಾಹಿತಿ ಲಭಿಸಿದೆ.
ಸೆ.7ರಂದು ತಡರಾತ್ರಿಯಲ್ಲಿ ಪಡುವನ್ನೂರು ಗ್ರಾಮದ ಕುದ್ಕಾಡಿಯ ಮನೆಗೆ ನುಗ್ಗಿದ್ದ ದರೋಡೆಕೋರರು ಮನೆಯಲ್ಲಿದ್ದ ಗುರುಪ್ರಸಾದ್ ರೈ ಮತ್ತು ಅವರ ತಾಯಿಯನ್ನು ಕಟ್ಟಿ ಹಾಕಿ, ತಲವಾರು ತೋರಿಸಿ ಬೆದರಿಸಿ ಕಪಾಟಿನಲ್ಲಿರಿಸಿದ್ದ ನಾಲ್ಕು ಚಿನ್ನದ ಬಳೆ, 30 ಸಾವಿರ ನಗದು ಮತ್ತು ತಾಯಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡಿದ್ದರು. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರ ತನಿಖೆಯಲ್ಲಿ ಕೇರಳ ಕಡೆಯಿಂದ ಬಂದಿದ್ದವರು ಕೃತ್ಯ ಎಸಗಿದ್ದರು ಎಂದು ತಿಳಿದುಬಂದಿತ್ತು. ಇದೀಗ ಪ್ರಕರಣದ ಸೂತ್ರಧಾರಿ ವಿಟ್ಲ ಪೆರುವಾಯಿ ನಿವಾಸಿ, ಕಾರು ಚಾಲಕ ಸುಧೀರ್ ಮಣಿಯಾಣಿ, ಇಚ್ಲಂಗೋಡು ಗ್ರಾಮದ ರವಿ, ಪೈವಳಿಕೆ ಸಮೀಪದ ಅಟ್ಟೆಗೋಳಿ ನಿವಾಸಿ ಕಿರಣ್, ಸೀತಾಂಗೋಳಿ ಬಳಿಯ ಬಾಡೂರು ನಿವಾಸಿ ವಸಂತ್, ಫೈಜಲ್ ಮತ್ತು ಕಾಸರಗೋಡು ಎಡನಾಡು ಗ್ರಾಮದ ಅಬ್ದುಲ್ ನಿಸಾರ್ ಆರೋಪಿಗಳೆಂದು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲ ಕ್ರಿಮಿನಲ್ ಹಿನ್ನೆಲೆಯವರು ಎಂಬ ಮಾಹಿತಿ ಪೊಲೀಸರಿಂದ ತಿಳಿದುಬಂದಿದೆ.
ಈ ಹಿಂದೆ ಕುದ್ಕಾಡಿಯ ಮನೆಯಲ್ಲಿ ನಡೆದ ಕಾರ್ಯಕ್ರಮ ಒಂದಕ್ಕೆ ಕಾಸರಗೋಡು ಭಾಗದ ಸಂಬಂಧಿಕರು ಕಾರಿನಲ್ಲಿ ಆಗಮಿಸಿದ್ದರು. ಕಾರು ಚಾಲಕನಾಗಿ ಸುಧೀರ್ ಮಣಿಯಾಣಿ ಆಗಮಿಸಿದ್ದು ಆ ಸಂದರ್ಭದಲ್ಲಿ ಕುದ್ಕಾಡಿಯ ಮನೆ ಒಬ್ಬಂಟಿಯಾಗಿರುವುದು ಮತ್ತು ಮನೆಯಲ್ಲಿ ಯಾರೂ ಹೆಚ್ಚು ಜನ ಇಲ್ಲದಿರುವುದನ್ನು ಗಮನಿಸಿದ್ದ. ಗುರುಪ್ರಸಾದ್ ರೈ ಹೆಚ್ಚಾಗಿ ಒಬ್ಬರೇ ಇರುತ್ತಿದ್ದರು. ಕೆಲವೊಮ್ಮೆ ಕೂಲಿ ಕೆಲಸಗಾರರು ಉಳಿದುಕೊಳ್ಳುತ್ತಿದ್ದರು.
ಕೃತ್ಯ ನಡೆಯುವ ಎರಡು ದಿನಗಳ ಹಿಂದೆ ತಾಯಿ ಕಸ್ತೂರಿ ರೈ ಮನೆಗೆ ಬಂದಿದ್ದರು. ಅಂದು ನಡುರಾತ್ರಿ 12 ಗಂಟೆ ವೇಳೆಗೆ ಹೊಕ್ಕಿದ್ದ ಆಗಂತುಕರು 4 ಗಂಟೆಯ ವರೆಗೂ ಮನೆಯಲ್ಲಿ ಹುಡುಕಾಟ ನಡೆಸಿದ್ದರು. ಗುಂಡಿಯಲ್ಲಿರುವ ಮನೆಗೆ ಒಂದೇ ರಸ್ತೆ ಇರುವುದರಿಂದ ಬಂದವರು ತಮ್ಮ ವಾಹನವನ್ನೂ ಮೇಲೆಯೇ ನಿಲ್ಲಿಸಿ ನಡೆದುಕೊಂಡೇ ಬಂದಿದ್ದರು. ಮುಖಕ್ಕೆ ಮುಸುಕು ಹಾಕ್ಕೊಂಡಿದ್ದರು. ಕೃತ್ಯದ ಬಳಿಕ ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ತೆರಳಿದ್ದರು. ಸುಳಿವು ಆಧರಿಸಿ ಪೊಲೀಸರು ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.
Police arrested six people in connection with robbery of a house at Kudkadi Thotadamoole of Paduvannur village in the night on September 7 in which the house members were tied, cash and golden ornaments were looted. The arrested accused are identified as Sudhir Peruvayi, and residents of Kasargod district in Kerala Pacchambala Ravi, Kiran, Vasanta, Fasal and Nisar. All the six have criminal background.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm