ಬ್ರೇಕಿಂಗ್ ನ್ಯೂಸ್
29-09-23 09:59 pm Udupi Correspondent ಕರಾವಳಿ
ಕುಂದಾಪುರ, ಸೆ.29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಪತಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಹೋದ ಪತ್ನಿಯೂ ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಮ್ಮಾಡಿ ಸಮೀಪದ ಕಟ್ಬೆಲ್ತೂರು ಗ್ರಾ.ಪಂ. ವ್ಯಾಪ್ತಿಯ ಸುಳ್ಸೆಯಲ್ಲಿ ಶುಕ್ರವಾರ ನಡೆದಿದೆ.
ಕಟ್ಬೆಲ್ತೂರು ಗ್ರಾಮದ ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೈವಸ್ಥಾನ ಬಳಿಯ ನಿವಾಸಿ ಮಹಾಬಲ ದೇವಾಡಿಗ (55), ಅವರ ಪತ್ನಿ ಲಕ್ಷ್ಮೀ ದೇವಾಡಿಗ (48) ಸಾವನ್ನಪ್ಪಿದವರು. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಪುತ್ರಿ ವಿದ್ಯಾಭ್ಯಾಸ ಮುಗಿಸಿ, ಮನೆಯಲ್ಲಿದ್ದಳು.
ಮಹಾಬಲ ದೇವಾಡಿಗ ಕೂಲಿ ಕಾರ್ಮಿಕರಾಗಿದ್ದು, ಮನೆ ಸಮೀಪದ ಕರಣಿಕರ ಮನೆಯಲ್ಲಿ ನಿತ್ಯ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆಯಾದರೂ ಮನೆಗೆ ಬಾರದಿದ್ದಾಗ ಪತ್ನಿ ಲಕ್ಷ್ಮೀ ಗಂಡನನ್ನು ಹುಡುಕಲು ತೆರಳಿದ್ದರು. ಈ ವೇಳೆ ಕಾಲುದಾರಿಯ ತೋಡಿನಲ್ಲಿ ಮಹಾಬಲ ಅವರು ವಿದ್ಯುತ್ ತಂತಿ ಹಿಡಿದುಕೊಂಡ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದರು. ಇದನ್ನು ನೋಡಿದ ಲಕ್ಷ್ಮೀ ಅವರು ಜೋರಾಗಿ ಕೂಗಿಕೊಂಡು ಆಸುಪಾಸಿನವರನ್ನು ಕರೆದಿದ್ದಾರೆ. ಸ್ಥಳೀಯರು ಬರುವ ಹೊತ್ತಿಗೆ ಮರದ ಕೋಲನ್ನು ಹಿಡಿದು, ಪತಿಯನ್ನು ರಕ್ಷಿಸಲು ಪ್ರಯತ್ನಿಸಿದ ಲಕ್ಷ್ಮಿ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಮಳೆಯಾಗಿದ್ದರಿಂದ ಒದ್ದೆಯಾದ ಸ್ಥಳದಲ್ಲಿ ನಿಂತಿದ್ದ ಕಾರಣ ಪತ್ನಿಯೂ ಸ್ಥಳದಲ್ಲೇ ಸಾವನ್ನಪ್ಪುವಂತಾಗಿದೆ.
In a tragic incident, a couple on their way to work was electrocuted after accidentally coming into contact with a live electric cable. The unfortunate incident occurred in the cultivation area of Sulse Bhatru in Hemmadi village here.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm