ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm