ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm