ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm