ಬ್ರೇಕಿಂಗ್ ನ್ಯೂಸ್
02-10-23 12:10 pm Mangalore Correspondent ಕರಾವಳಿ
ಮಂಗಳೂರು, ಅ.2: ಶಿವಮೊಗ್ಗ ಈದ್ ಮಿಲಾದ್ ಸಂಘರ್ಷವನ್ನ ಖಂಡಿಸುತ್ತೇನೆ. ಮೊನ್ನೆ ಗಣೇಶ ಚತುರ್ಥಿ ಉತ್ಸವ ಯಾವುದೇ ಗಲಾಟೆ ನಡೆಯದೇ ಶಾಂತಿಯುತವಾಗಿ ನಡೆದಿತ್ತು. ಆದರೆ ಅದೇ ಶಿವಮೊಗ್ಗದಲ್ಲಿ ಈದ್ ಮಿಲಾದ್ ಹೆಸರಲ್ಲಿ ಕಲ್ಲು ತೂರಾಟ ಮಾಡಿದ್ದಾರೆ. ಈ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ಶಿವಮೊಗ್ಗ ಗಲಾಟೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈದ್ ಮೆರವಣಿಗೆಯ ಸಂದರ್ಭದಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈ ರೀತಿ ಆಗಿದೆ. ರಾಜ್ಯದಲ್ಲಿ ಪಾಕಿಸ್ತಾನ ಧ್ವಜ, ಪಾಕ್ ಪರ ಘೋಷಣೆ ಆಗ್ತಾ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಾಣ್ತಿದ್ದೇವೆ. ಮಂಗಳೂರು ಕುಕ್ಕರ್ ಬಾಂಬ್ ನಲ್ಲೂ ಶಿವಮೊಗ್ಗದ ನಂಟು ಕಂಡುಬಂದಿತ್ತು. ಭಟ್ಕಳ ಬ್ರದರ್ಸ್ ರೀತಿಯಲ್ಲಿ ತೀರ್ಥಹಳ್ಳಿ ಬ್ರದರ್ಸ್ ಮೂಲಕ ಭಯೋತ್ಪಾದಕ ಚಟುವಟಿಕೆ ಆಗ್ತಿದೆ.
ಆದರೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳದೇ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ವಿಫಲವಾಗಿದೆ. ಈ ಘಟನೆಯಲ್ಲಿ ಆತಂಕವಾದದ ಸಾಧ್ಯತೆ ಇದೆಯಾ ಅಂತ ತನಿಖೆ ಮಾಡಬೇಕು. ಇದರ ಪೂರ್ಣ ತನಿಖೆ ಆಗಲಿ, ಇದು ಸರ್ಕಾರದ ಪೂರ್ಣ ವೈಫಲ್ಯ. ಸಿಎಂ ಸಿದ್ದರಾಮಯ್ಯ ತಮ್ಮ ಮತಬೇಟೆಗಾಗಿ ಇದರ ವಿರುದ್ದ ಕ್ರಮ ಕೈಗೊಳ್ತಾ ಇಲ್ಲ.
ಶಿವಮೊಗ್ಗದಲ್ಲಿ ಹರ್ಷ ಮತ್ತು ಪ್ರವೀಣ್ ಹತ್ಯೆ ಬಳಿಕ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿತ್ತು. ಈ ಸರ್ಕಾರ ಇಂತಹ ವಿಚಾರದಲ್ಲಿಯೂ ಸಣ್ಣ ಮಟ್ಟದ ರಾಜಕಾರಣ ಮಾಡ್ತಾ ಇದೆ. ತುಷ್ಟೀಕರಣ ನೀತಿ ಮೂಲಕ ಮತಾಂಧ ಶಕ್ತಿಗಳಿಗೆ ಮತ್ತೆ ಧೈರ್ಯ ಬಂದಿದೆ. ಕೋಲಾರದಲ್ಲಿ ತಲ್ವಾರ್ ದ್ವಾರ ಹಾಕಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ ಮೌನ ವಹಿಸಿದ್ದು ಇಂತಹ ಗಲಾಟೆಗೆ ಕಾರಣವಾಗಿದೆ. ದೇಶದಲ್ಲಿ ಐಎನ್ಡಿಐಎ ಒಕ್ಕೂಟ ಹಾಗೂ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎನ್ನುವುದನ್ನು ತೋರಿಸುತ್ತದೆ ಎಂದು ನಳಿನ್ ಕುಮಾರ್ ವಿಶ್ಲೇಷಿಸಿದರು.
Stone pelting on Eid in Shivamogga, Nalin Kateel in Mangalore slams incident. The district administration of Karnataka’s Shivamogga imposed section 144 in Ragi Gudda area of the town on Monday after clashes took place between two communities on Sunday evening. A total of five people were reportedly injured in a stone-pelting incident at Ragi Gudda.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm