ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm