ಬ್ರೇಕಿಂಗ್ ನ್ಯೂಸ್
03-10-23 07:34 pm Mangalore Correspondent ಕರಾವಳಿ
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಮಂಗಳೂರಿನ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಇವರಿಗೆ ಇಬ್ಬರು ಮಕ್ಕಳಿದ್ದು ಮಗ ದುಬೈನಲ್ಲಿ ಉದ್ಯೋಗದಲ್ಲಿದ್ದು ಈಗ ರಜೆಯಲ್ಲಿ ಊರಿಗೆ ಬಂದು ಪ್ರತ್ಯೇಕ ಮನೆ ಮಾಡಿಕೊಂಡು ಇದ್ದಾನೆ. ಮಗಳು ಮತ್ತು ಅಳಿಯ ಮುಂಬೈನಲ್ಲಿದ್ದು ತಂದೆ ತಾಯಿ ಇದ್ದ ಮನೆ ಅವರಿಗೆ ಸೇರಿತ್ತು. ಮಗಳು, ಅಳಿಯ ಈಗ ಊರಿಗೆ ಬಂದಿದ್ದು ಇವತ್ತು ಯಾವುದೋ ಕೇಸಿಗೆ ಸಂಬಂಧಿಸಿ ಕೋರ್ಟಿಗೆ ಹೋಗಿದ್ದರು. ಮಗ ಮಾತ್ರ ಊರಿಗೆ ಬಂದರೂ ತಂದೆ, ತಾಯಿ ನೋಡಲು ಮನೆಗೆ ಬಂದಿರಲಿಲ್ಲ. ಇವರ ನಡುವೆ ಏನೋ ಮನಸ್ತಾಪ ಇತ್ತೆಂದು ಹೇಳಲಾಗುತ್ತಿದೆ. ಮಕ್ಕಳ ಬಗ್ಗೆ ಮನನೊಂದು ತಾಯಿ ಮತ್ತು ದೊಡ್ಡಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಕ್ಕಳು ಉದ್ಯೋಗದಲ್ಲಿದ್ದರಿಂದ ಸಾಕಷ್ಟು ಸ್ಥಿತಿವಂತರೇ ಆಗಿದ್ದರು. ಆದರೂ ವೃದ್ಧ ತಂದೆ ಮನೆಯಲ್ಲಿ ಕುಳಿತು ಬೋರ್ ಆಗುತ್ತೆ ಎಂದು ಕೆಲಸಕ್ಕೆ ಹೋಗುತ್ತಿದ್ದರಂತೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ, ತನಿಖೆ ನಡೆಸಿದ್ದಾರೆ.
Mangalore, elderly sisters commit suicide at Kadri kambala in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm