ಬ್ರೇಕಿಂಗ್ ನ್ಯೂಸ್
03-10-23 11:15 pm Mangaluru Correspondent ಕರಾವಳಿ
ಮಂಗಳೂರು, ಅ.3: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿಯಾಗಿದ್ದ 31ರ ಹರೆಯದ ವಿಜಾಪುರ ಮೂಲದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮನ ಗೌಡ ಚೌದರಿ (31) ಮೃತ ಪೊಲೀಸ್ ಸಿಬಂದಿ.
ಮಂಗಳೂರಿನ ವಯರ್ ಲೆಸ್ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಯ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಕಳೆದ ಏಳು ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಇನ್ಸ್ಪೆಕ್ಟರ್ ಅವರಿಗೆ ಡೆಂಗ್ಯೂ ಜ್ವರ ಬಾಧಿಸಿದ್ದರಿಂದ ಮಂಗಳವಾರ ಬೆಳಗ್ಗೆ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸೋಮನಗೌಡ ಅವರೇ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಿ ನಡೆದು ಹೊರ ಬರುತ್ತಿದ್ದಾಗಲೇ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸೋಮನಗೌಡ ಯಾವುದೇ ರೀತಿಯ ಕುಡಿತ, ಸಿಗರೇಟ್ ಚಟ ಹೊಂದಿರಲಿಲ್ಲ. ಬೆಳಗ್ಗೆ ಒಂದೂವರೆ ಗಂಟೆ ವಾಕಿಂಗ್, ಸಂಜೆ ದಿನವೂ ಶಟ್ಲ್ ಆಡಿಕೊಂಡು ತುಂಬ ಆರೋಗ್ಯ ಕಾಳಜಿ ಹೊಂದಿದ್ದರು. ಅಂಥ ಯುವಕನಿಗೆ ಈ ರೀತಿ ಹಾರ್ಟ್ ಅಟ್ಯಾಕ್ ಆಗೋದನ್ನು ನಂಬಲಾಗುತ್ತಿಲ್ಲ ಎಂದು ಅವರ ಜೊತೆಗಿದ್ದ ಸಿಬಂದಿ ಹೇಳುತ್ತಾರೆ. ಅಲ್ಲದೆ, ಸೋಮನ ಗೌಡ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಪತ್ನಿಯೂ ಮಂಗಳೂರಿನಲ್ಲೇ ಇದ್ದರು. ಕಳೆದ ಕೋವಿಡ್ ಸಂದರ್ಭದಲ್ಲಿ ತನ್ನ ಎರಡು ತಿಂಗಳ ವೇತನವನ್ನೇ ಕೋವಿಡ್ ಸಂತ್ರಸ್ತರಿಗೆ ನೀಡಿ ಉದಾರತೆ ಮೆರೆದಿದ್ದರು. ತುಂಬ ಒಳ್ಳೆಯ ನಡತೆ ಹೊಂದಿದ್ದರು ಎನ್ನುತ್ತಾರೆ, ಅಲ್ಲಿನ ಸಿಬಂದಿ. ವೈದ್ಯರು ಹೃದಯಾಘಾತ ಎಂದಿದ್ದು ಪೋಸ್ಟ್ ಮಾರ್ಟಮ್ ಬಳಿಕ ನಿಜ ವಿಚಾರ ತಿಳಿಯಬೇಕಷ್ಟೆ.
A head Police constable who was working with Mangalore City Armed Reserve (CAR) police died of heart attack on Tuesday at falnir, October 3. The CAR head constable Somanna Gowda Chaudhary is the deceased person.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm