ಬ್ರೇಕಿಂಗ್ ನ್ಯೂಸ್
03-10-23 11:15 pm Mangaluru Correspondent ಕರಾವಳಿ
ಮಂಗಳೂರು, ಅ.3: ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿಯಾಗಿದ್ದ 31ರ ಹರೆಯದ ವಿಜಾಪುರ ಮೂಲದ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮನ ಗೌಡ ಚೌದರಿ (31) ಮೃತ ಪೊಲೀಸ್ ಸಿಬಂದಿ.
ಮಂಗಳೂರಿನ ವಯರ್ ಲೆಸ್ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಯ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಕಳೆದ ಏಳು ವರ್ಷಗಳಿಂದ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಇನ್ಸ್ಪೆಕ್ಟರ್ ಅವರಿಗೆ ಡೆಂಗ್ಯೂ ಜ್ವರ ಬಾಧಿಸಿದ್ದರಿಂದ ಮಂಗಳವಾರ ಬೆಳಗ್ಗೆ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸೋಮನಗೌಡ ಅವರೇ ಜೀಪಿನಲ್ಲಿ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಿ ನಡೆದು ಹೊರ ಬರುತ್ತಿದ್ದಾಗಲೇ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸೋಮನಗೌಡ ಯಾವುದೇ ರೀತಿಯ ಕುಡಿತ, ಸಿಗರೇಟ್ ಚಟ ಹೊಂದಿರಲಿಲ್ಲ. ಬೆಳಗ್ಗೆ ಒಂದೂವರೆ ಗಂಟೆ ವಾಕಿಂಗ್, ಸಂಜೆ ದಿನವೂ ಶಟ್ಲ್ ಆಡಿಕೊಂಡು ತುಂಬ ಆರೋಗ್ಯ ಕಾಳಜಿ ಹೊಂದಿದ್ದರು. ಅಂಥ ಯುವಕನಿಗೆ ಈ ರೀತಿ ಹಾರ್ಟ್ ಅಟ್ಯಾಕ್ ಆಗೋದನ್ನು ನಂಬಲಾಗುತ್ತಿಲ್ಲ ಎಂದು ಅವರ ಜೊತೆಗಿದ್ದ ಸಿಬಂದಿ ಹೇಳುತ್ತಾರೆ. ಅಲ್ಲದೆ, ಸೋಮನ ಗೌಡ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು ಪತ್ನಿಯೂ ಮಂಗಳೂರಿನಲ್ಲೇ ಇದ್ದರು. ಕಳೆದ ಕೋವಿಡ್ ಸಂದರ್ಭದಲ್ಲಿ ತನ್ನ ಎರಡು ತಿಂಗಳ ವೇತನವನ್ನೇ ಕೋವಿಡ್ ಸಂತ್ರಸ್ತರಿಗೆ ನೀಡಿ ಉದಾರತೆ ಮೆರೆದಿದ್ದರು. ತುಂಬ ಒಳ್ಳೆಯ ನಡತೆ ಹೊಂದಿದ್ದರು ಎನ್ನುತ್ತಾರೆ, ಅಲ್ಲಿನ ಸಿಬಂದಿ. ವೈದ್ಯರು ಹೃದಯಾಘಾತ ಎಂದಿದ್ದು ಪೋಸ್ಟ್ ಮಾರ್ಟಮ್ ಬಳಿಕ ನಿಜ ವಿಚಾರ ತಿಳಿಯಬೇಕಷ್ಟೆ.
A head Police constable who was working with Mangalore City Armed Reserve (CAR) police died of heart attack on Tuesday at falnir, October 3. The CAR head constable Somanna Gowda Chaudhary is the deceased person.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm