ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm