ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm