ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am