ಬ್ರೇಕಿಂಗ್ ನ್ಯೂಸ್
07-10-23 07:20 pm Mangalore Correspondent ಕರಾವಳಿ
ಪುತ್ತೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಹಿಂದೂಗಳೇ. ಅವರಿಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗಾದ ರೀತಿಯದ್ದೇ ಮತಾಂಧ ದಾಳಿಗಳ ಅನುಭವ ಆಗಲಿದೆ. ಹಾಗಾಗಿ ಮತಾಂಧರ ಓಲೈಕೆ ರಾಜಕಾರಣ ಹಿಂದುಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಓಲೈಕೆ ಮಾಡುವ ನಿಮಗೂ ಮತಾಂಧರ ದಾಳಿಯ ಗಂಡಾಂತರ ತಪ್ಪಿದ್ದಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶಿವಮೊಗ್ಗದಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರತಿ ಮನೆಗೂ ಹೋಗಿ ದಾಳಿಗೊಳಗಾದ ಹಿಂದೂಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಅಲ್ಲಿನ ಮಕ್ಕಳು, ಮಹಿಳೆಯರು ಪಡುತ್ತಿರುವ ವೇದನೆ ಕಣ್ಣೀರು ತರಿಸುತ್ತದೆ. ಶಿಕ್ಷಣ ನೀಡಿದ ಶಿಕ್ಷಕಿಯನ್ನೂ ಬಿಡದೇ ಮತಾಂಧರು ದಾಳಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ಬದುಕು ನಡೆಸಲು ಹಿಂದೂಗಳು ಭಯಕ್ಕೀಡಾಗಿದ್ದಾರೆ. ಇದೇ ರೀತಿ ಓಲೈಕೆ ನಡೆಸಿದರೆ ಇಂತಹ ಘಟನೆಗಳು ಶಿವಮೊಗ್ಗ ಬಿಟ್ಟು ಬೇರೆ ಕಡೆಯೂ ಪಸರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿಪ್ಪು, ಔರಂಗಜೇಬನ ಪ್ರತಿಕೃತಿ ಪ್ರದರ್ಶನ ನಡೆಸಿ ತಲವಾರು ಝಳಪಿಸಿದ ರಾಗಿಗುಡ್ಡದಲ್ಲಿ ದಾಂಧಲೆ ಮಾಡಿದ ಮತಾಂಧರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಂ ಓಲೈಕೆಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಕೇಸ್ ದಾಖಲಿಸಿದೆ. ಈ ಕೇಸ್ ಗೆ ಹೆದರಿ ಕುಳಿತುಕೊಳ್ಳುವ ಜಾಯಮಾನ ನನ್ನದಲ್ಲ. ಕರ್ನಾಟಕದ ಎಲ್ಲೇ ಮಂತಾಧರ ದಾಳಿ ಆದರೂ ನಾನು ಅಲ್ಲಿನ ಹಿಂದೂಗಳ ಜೊತೆಗಿದ್ದೇನೆ. ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು.
Hindus must take up the sword if muslims live like terrorists says Arun Puthila in Puttur. Siddaramaiah and Parameshwar will also face the attack of Muslims.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm