ಬ್ರೇಕಿಂಗ್ ನ್ಯೂಸ್
07-10-23 07:20 pm Mangalore Correspondent ಕರಾವಳಿ
ಪುತ್ತೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಹಿಂದೂಗಳೇ. ಅವರಿಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗಾದ ರೀತಿಯದ್ದೇ ಮತಾಂಧ ದಾಳಿಗಳ ಅನುಭವ ಆಗಲಿದೆ. ಹಾಗಾಗಿ ಮತಾಂಧರ ಓಲೈಕೆ ರಾಜಕಾರಣ ಹಿಂದುಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಓಲೈಕೆ ಮಾಡುವ ನಿಮಗೂ ಮತಾಂಧರ ದಾಳಿಯ ಗಂಡಾಂತರ ತಪ್ಪಿದ್ದಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶಿವಮೊಗ್ಗದಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರತಿ ಮನೆಗೂ ಹೋಗಿ ದಾಳಿಗೊಳಗಾದ ಹಿಂದೂಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಅಲ್ಲಿನ ಮಕ್ಕಳು, ಮಹಿಳೆಯರು ಪಡುತ್ತಿರುವ ವೇದನೆ ಕಣ್ಣೀರು ತರಿಸುತ್ತದೆ. ಶಿಕ್ಷಣ ನೀಡಿದ ಶಿಕ್ಷಕಿಯನ್ನೂ ಬಿಡದೇ ಮತಾಂಧರು ದಾಳಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ಬದುಕು ನಡೆಸಲು ಹಿಂದೂಗಳು ಭಯಕ್ಕೀಡಾಗಿದ್ದಾರೆ. ಇದೇ ರೀತಿ ಓಲೈಕೆ ನಡೆಸಿದರೆ ಇಂತಹ ಘಟನೆಗಳು ಶಿವಮೊಗ್ಗ ಬಿಟ್ಟು ಬೇರೆ ಕಡೆಯೂ ಪಸರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿಪ್ಪು, ಔರಂಗಜೇಬನ ಪ್ರತಿಕೃತಿ ಪ್ರದರ್ಶನ ನಡೆಸಿ ತಲವಾರು ಝಳಪಿಸಿದ ರಾಗಿಗುಡ್ಡದಲ್ಲಿ ದಾಂಧಲೆ ಮಾಡಿದ ಮತಾಂಧರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಂ ಓಲೈಕೆಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಕೇಸ್ ದಾಖಲಿಸಿದೆ. ಈ ಕೇಸ್ ಗೆ ಹೆದರಿ ಕುಳಿತುಕೊಳ್ಳುವ ಜಾಯಮಾನ ನನ್ನದಲ್ಲ. ಕರ್ನಾಟಕದ ಎಲ್ಲೇ ಮಂತಾಧರ ದಾಳಿ ಆದರೂ ನಾನು ಅಲ್ಲಿನ ಹಿಂದೂಗಳ ಜೊತೆಗಿದ್ದೇನೆ. ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು.
Hindus must take up the sword if muslims live like terrorists says Arun Puthila in Puttur. Siddaramaiah and Parameshwar will also face the attack of Muslims.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm