ಬ್ರೇಕಿಂಗ್ ನ್ಯೂಸ್
07-10-23 07:20 pm Mangalore Correspondent ಕರಾವಳಿ
ಪುತ್ತೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಹಿಂದೂಗಳೇ. ಅವರಿಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗಾದ ರೀತಿಯದ್ದೇ ಮತಾಂಧ ದಾಳಿಗಳ ಅನುಭವ ಆಗಲಿದೆ. ಹಾಗಾಗಿ ಮತಾಂಧರ ಓಲೈಕೆ ರಾಜಕಾರಣ ಹಿಂದುಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಓಲೈಕೆ ಮಾಡುವ ನಿಮಗೂ ಮತಾಂಧರ ದಾಳಿಯ ಗಂಡಾಂತರ ತಪ್ಪಿದ್ದಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶಿವಮೊಗ್ಗದಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರತಿ ಮನೆಗೂ ಹೋಗಿ ದಾಳಿಗೊಳಗಾದ ಹಿಂದೂಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಅಲ್ಲಿನ ಮಕ್ಕಳು, ಮಹಿಳೆಯರು ಪಡುತ್ತಿರುವ ವೇದನೆ ಕಣ್ಣೀರು ತರಿಸುತ್ತದೆ. ಶಿಕ್ಷಣ ನೀಡಿದ ಶಿಕ್ಷಕಿಯನ್ನೂ ಬಿಡದೇ ಮತಾಂಧರು ದಾಳಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ಬದುಕು ನಡೆಸಲು ಹಿಂದೂಗಳು ಭಯಕ್ಕೀಡಾಗಿದ್ದಾರೆ. ಇದೇ ರೀತಿ ಓಲೈಕೆ ನಡೆಸಿದರೆ ಇಂತಹ ಘಟನೆಗಳು ಶಿವಮೊಗ್ಗ ಬಿಟ್ಟು ಬೇರೆ ಕಡೆಯೂ ಪಸರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿಪ್ಪು, ಔರಂಗಜೇಬನ ಪ್ರತಿಕೃತಿ ಪ್ರದರ್ಶನ ನಡೆಸಿ ತಲವಾರು ಝಳಪಿಸಿದ ರಾಗಿಗುಡ್ಡದಲ್ಲಿ ದಾಂಧಲೆ ಮಾಡಿದ ಮತಾಂಧರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಂ ಓಲೈಕೆಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಕೇಸ್ ದಾಖಲಿಸಿದೆ. ಈ ಕೇಸ್ ಗೆ ಹೆದರಿ ಕುಳಿತುಕೊಳ್ಳುವ ಜಾಯಮಾನ ನನ್ನದಲ್ಲ. ಕರ್ನಾಟಕದ ಎಲ್ಲೇ ಮಂತಾಧರ ದಾಳಿ ಆದರೂ ನಾನು ಅಲ್ಲಿನ ಹಿಂದೂಗಳ ಜೊತೆಗಿದ್ದೇನೆ. ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು.
Hindus must take up the sword if muslims live like terrorists says Arun Puthila in Puttur. Siddaramaiah and Parameshwar will also face the attack of Muslims.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm