ಬ್ರೇಕಿಂಗ್ ನ್ಯೂಸ್
10-10-23 08:22 pm Mangalore Correspondent ಕರಾವಳಿ
ಉಳ್ಳಾಲ, ಅ.10: ಈದ್ ಮಿಲಾದ್ ವಾಹನ ಜಾಥಾ ನೆಪದಲ್ಲಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಅಬ್ಬರಿಸಿ ಸಾರ್ವಜನಿಕರಿಗೆ ಕಿರಿ, ಕಿರಿ ನೀಡಿದ್ದ 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ದಂಡ ಪ್ರಯೋಗಿಸಿದ್ದಲ್ಲದೆ ಪೋಷಕರ ಮುಂದೆಯೇ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಳೆದ ಸೆ.28 ರಂದು ಪ್ರವಾದಿ ಮಹಮ್ಮದರ ಜನ್ಮದಿನದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ನಡೆದಿದ್ದ ಈದ್ ಮಿಲಾದ್ ಹಬ್ಬಕ್ಕೆ ಯುವಕರ ಗುಂಪೊಂದು ಕುತ್ತಾರು, ಮಾಡೂರು ಕಡೆಯಿಂದ ವಾಹನ ಜಾಥಾ ನಡೆಸಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಕಿರಿ,ಕಿರಿ ಉಂಟು ಮಾಡಿದಲ್ಲದೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ಏರಿ ವಿಕೃತವಾಗಿ ವರ್ತಿಸಿ ಘೋಷಣೆಗಳನ್ನ ಕೂಗಿದ್ದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯುವಕರ ವರ್ತನೆಗೆ ಮುಸ್ಲಿಂ ಧರ್ಮೀಯರೇ ಆಕ್ಷೇಪ ವ್ಯಕ್ತಪಡಿಸಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

ಮಾಡೂರಿನ ಇಬ್ರಾಹಿಂ, ಅಂಬ್ಲಮೊಗರುವಿನ ಮಹಮ್ಮದ್ ಅರ್ಷಾದ್ ಬಶೀರ್, ಪಡು ಮಾರ್ನಾಡುವಿನ ಅಶೀಶ್ ಪಿಂಟೊ, ಮಂಜನಾಡಿ ಗ್ರಾಮದ ಕೆ.ಎ.ಇಕ್ಬಾಲ್ ಅಬ್ದುಲ್ ರಹಿಮಾನ್, ಇಮ್ರಾನ್, ಇಬ್ರಾಹಿಂ ಬಾತಿಷ್ ಇಸ್ಮಾಯಿಲ್, ಉಮರ್ ಫಾರೂಕ್, ಅಬ್ದುಲ್ ಖಾದರ್, ಕೆ.ಎ.ಇಕ್ಬಾಲ್, ಬಜಾಲಿನ ಮಹಮ್ಮದ್ ಹುಸೇನ್, ಕೋಟೆಕಾರಿನ ಶೌಕತ್ ಆಲಿ, ಬೆಳ್ತಂಗಡಿಯ ಮಹಮ್ಮದ್ ನಿಝಾರ್, ಮಾಡೂರಿನ ಶೇಖ್ ಖಲೀಲ್ ಅಹ್ಮದ್, ಪಾವೂರಿನ ಇಬ್ರಾಹಿಂ, ಸಜೀಪ ನಡುವಿನ ಮಹಮ್ಮದ್ ಇರ್ಷಾದ್ ಸೇರಿದಂತೆ ಒಟ್ಟು 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡ ವಸೂಲು ಮಾಡಿದ್ದಾರೆ.
ಪೋಷಕರ ಸಮ್ಮುಖದಲ್ಲೇ ಉಳ್ಳಾಲ ಪೊಲೀಸ್ ಠಾಣಾ ನೂತನ ಪಿಐ ಬಾಲಕೃಷ್ಣ ಅವರು ಯುವಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಾರದಾ ಉತ್ಸವಕ್ಕೂ ಡಿ.ಜೆ ಅಳವಡಿಸದಂತೆ ಇಲಾಖೆಯ ಆದೇಶ ಬಂದಿದ್ದು ಉಳ್ಳಾಲಕ್ಕೂ ಇದು ಅನ್ವಯಿಸಲಿದೆ ಎಂದು ಪಿಐ ಬಾಲಕೃಷ್ಣ ತಿಳಿಸಿದ್ದಾರೆ.
Mangalore Ullal eid disturbance by youths on abakka circle, Inapector warns all youths found in video.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm