ಬ್ರೇಕಿಂಗ್ ನ್ಯೂಸ್
10-10-23 08:22 pm Mangalore Correspondent ಕರಾವಳಿ
ಉಳ್ಳಾಲ, ಅ.10: ಈದ್ ಮಿಲಾದ್ ವಾಹನ ಜಾಥಾ ನೆಪದಲ್ಲಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಅಬ್ಬರಿಸಿ ಸಾರ್ವಜನಿಕರಿಗೆ ಕಿರಿ, ಕಿರಿ ನೀಡಿದ್ದ 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ದಂಡ ಪ್ರಯೋಗಿಸಿದ್ದಲ್ಲದೆ ಪೋಷಕರ ಮುಂದೆಯೇ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಳೆದ ಸೆ.28 ರಂದು ಪ್ರವಾದಿ ಮಹಮ್ಮದರ ಜನ್ಮದಿನದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ನಡೆದಿದ್ದ ಈದ್ ಮಿಲಾದ್ ಹಬ್ಬಕ್ಕೆ ಯುವಕರ ಗುಂಪೊಂದು ಕುತ್ತಾರು, ಮಾಡೂರು ಕಡೆಯಿಂದ ವಾಹನ ಜಾಥಾ ನಡೆಸಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಕಿರಿ,ಕಿರಿ ಉಂಟು ಮಾಡಿದಲ್ಲದೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ಏರಿ ವಿಕೃತವಾಗಿ ವರ್ತಿಸಿ ಘೋಷಣೆಗಳನ್ನ ಕೂಗಿದ್ದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯುವಕರ ವರ್ತನೆಗೆ ಮುಸ್ಲಿಂ ಧರ್ಮೀಯರೇ ಆಕ್ಷೇಪ ವ್ಯಕ್ತಪಡಿಸಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

ಮಾಡೂರಿನ ಇಬ್ರಾಹಿಂ, ಅಂಬ್ಲಮೊಗರುವಿನ ಮಹಮ್ಮದ್ ಅರ್ಷಾದ್ ಬಶೀರ್, ಪಡು ಮಾರ್ನಾಡುವಿನ ಅಶೀಶ್ ಪಿಂಟೊ, ಮಂಜನಾಡಿ ಗ್ರಾಮದ ಕೆ.ಎ.ಇಕ್ಬಾಲ್ ಅಬ್ದುಲ್ ರಹಿಮಾನ್, ಇಮ್ರಾನ್, ಇಬ್ರಾಹಿಂ ಬಾತಿಷ್ ಇಸ್ಮಾಯಿಲ್, ಉಮರ್ ಫಾರೂಕ್, ಅಬ್ದುಲ್ ಖಾದರ್, ಕೆ.ಎ.ಇಕ್ಬಾಲ್, ಬಜಾಲಿನ ಮಹಮ್ಮದ್ ಹುಸೇನ್, ಕೋಟೆಕಾರಿನ ಶೌಕತ್ ಆಲಿ, ಬೆಳ್ತಂಗಡಿಯ ಮಹಮ್ಮದ್ ನಿಝಾರ್, ಮಾಡೂರಿನ ಶೇಖ್ ಖಲೀಲ್ ಅಹ್ಮದ್, ಪಾವೂರಿನ ಇಬ್ರಾಹಿಂ, ಸಜೀಪ ನಡುವಿನ ಮಹಮ್ಮದ್ ಇರ್ಷಾದ್ ಸೇರಿದಂತೆ ಒಟ್ಟು 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡ ವಸೂಲು ಮಾಡಿದ್ದಾರೆ.
ಪೋಷಕರ ಸಮ್ಮುಖದಲ್ಲೇ ಉಳ್ಳಾಲ ಪೊಲೀಸ್ ಠಾಣಾ ನೂತನ ಪಿಐ ಬಾಲಕೃಷ್ಣ ಅವರು ಯುವಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಾರದಾ ಉತ್ಸವಕ್ಕೂ ಡಿ.ಜೆ ಅಳವಡಿಸದಂತೆ ಇಲಾಖೆಯ ಆದೇಶ ಬಂದಿದ್ದು ಉಳ್ಳಾಲಕ್ಕೂ ಇದು ಅನ್ವಯಿಸಲಿದೆ ಎಂದು ಪಿಐ ಬಾಲಕೃಷ್ಣ ತಿಳಿಸಿದ್ದಾರೆ.
Mangalore Ullal eid disturbance by youths on abakka circle, Inapector warns all youths found in video.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm