ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm