ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm