ಬ್ರೇಕಿಂಗ್ ನ್ಯೂಸ್
11-11-20 05:12 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 11 : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಜನರು ತಮ್ಮ ಮೂಲ ಸೌಕರ್ಯಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ನೀಡಿ ಬೇಸತ್ತು ಈಗ ಪ್ರಧಾನಿಯ ಮೊರೆ ಹೋಗಿದ್ದಾರೆ. ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು- ಕಮಿಲ- ಬಳ್ಪ ರಸ್ತೆ ಸಮಸ್ಯೆಯ ವೀಡಿಯೊ ಸಹಿತ ವಿವರಣೆಯುಳ್ಳ ಸಿ.ಡಿ. ತಯಾರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ರವಾನಿಸಿದ್ದಾರೆ. ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಸಿಡಿ ಮತ್ತು ಮನವಿಯನ್ನು ಕಳುಹಿಸಿದ್ದಾರೆ.
ಇಂದು ಅತ್ಯಾಧುನಿಕ ತಂತ್ರಜ್ಞಾನದ ಮಾಧ್ಯಮಗಳಿದ್ದರೂ, ಅಂಚೆ ಕಚೇರಿ ಮೂಲಕವೇ ಸಮಸ್ಯೆ ಹೊತ್ತ ವೀಡಿಯೊ ಸಿ.ಡಿ.ಯನ್ನು ಪ್ರಧಾನಿಗೆ ಕಳುಹಿಸಿದ್ದು ವಿಶೇಷ. ಗ್ರಾಮೀಣ ಭಾಗದಲ್ಲಿ ಬಹುಪಾಲು ಮಂದಿ ಅಂಚೆ ಕಚೇರಿ ಬಳಸುತ್ತಿದ್ದಾರೆ. ಗ್ರಾಮಾಂತರದ ಬ್ಯಾಂಕಿಂಗ್ ವ್ಯವಸ್ಥೆ ಕೂಡ ಅಂಚೆ ಕಚೇರಿಯೇ ಆಗಿದೆ. ಹೀಗಾಗಿ ಆಧುನಿಕ ವ್ಯವಸ್ಥೆ ಇದ್ದರೂ ಗ್ರಾಮೀಣ ಭಾಗದ ಅಂಚೆ ಕಚೇರಿ ಬಳಕೆಯಾಗುವಂತೆ ಮಾಡಲು ಸಿ.ಡಿ. ರವಾನೆಯನ್ನು ನಾಗರಿಕ ಹೋರಾಟ ಕ್ರಿಯಾ ಸಮಿತಿ ಅಂಚೆ ಮೂಲಕ ಮಾಡಿದೆ.
ವೀಡಿಯೊ ಸಿ.ಡಿ. ರವಾನೆ ಸಂದರ್ಭ ನಾಗರಿಕ ಹೋರಾಟ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ಪಿ.ಎಸ್. ಗಂಗಾಧರ ಭಟ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಜೀವನ್ ಮಲ್ಕಜೆ, ಲಕ್ಷ್ಮೀಶ ಗಬ್ಲಡ್ಕ, ಮಹೇಶ್ ಪುಚ್ಚಪ್ಪಾಡಿ, ಹರ್ಷಿತ್ ಕಾಂತಿಲ, ಬಾಬು ಕಮಿಲ, ಸುರೇಶ್ ಮೊಗ್ರ , ವಿಶ್ವನಾಥ ಕೇಂಬ್ರೋಳಿ ಮತ್ತಿತರರು ಇದ್ದರು.
Villagers of Kamila-Mogra in Guthigaru gram panchayat of Sullia taluk in Dakshina Kannada have sent a CD that contains a documentary that narrates the pathetic condition of their village, which lacks basic infrastructure, to Prime Minister Narendra Modi.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm