ಬ್ರೇಕಿಂಗ್ ನ್ಯೂಸ್
13-10-23 02:05 pm Mangalore Correspondent ಕರಾವಳಿ
ಮಂಗಳೂರು, ಅ.13: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್ಗಳ ಸಾಲಿಗೆ 'ಪಲ್ಲಕ್ಕಿ' ಉತ್ಸವ ಹೆಸರಿನ ಸ್ಲೀಪರ್ ಬಸ್ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.
ಐರಾವತ, ಅಂಬಾರಿ ರೀತಿಯಲ್ಲೇ ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ 'ಪಲ್ಲಕ್ಕಿ' ಉತ್ಸವ ಬಸ್ಗಳಿಗೆ ಅಕ್ಟೋಬರ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದರು. ಕೆಎಸ್ಆರ್ಟಿಸಿ 40 ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದು, ಇದರಲ್ಲಿ ಮಂಗಳೂರು ವಿಭಾಗಕ್ಕೆ 8 ಮತ್ತು ಪುತ್ತೂರು ವಿಭಾಗಕ್ಕೆ 4 ಬಸ್ಗಳು ಬರಲಿದ್ದು ಹೆಚ್ಚಿನವು ಬೆಂಗಳೂರಿಗೆ ಪ್ರಯಾಣಿಸಲಿವೆ.
ಪುತ್ತೂರು ಮತ್ತು ಧರ್ಮಸ್ಥಳ ಡಿಪೋಗಳಿಗೆ ತಲಾ 2ರಂತೆ ಬಸ್ ಗಳನ್ನು ನೀಡಲಾಗಿದ್ದು ಪುತ್ತೂರು, ಧರ್ಮಸ್ಥಳ ಮತ್ತು ಬೆಳ್ತಂಗಡಿಯಿಂದ ಬೆಂಗಳೂರಿಗೆ ರಾತ್ರಿ ಸಂಚಾರ ನಡೆಸಲಿವೆ ಎಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ. ಇದಲ್ಲದೆ, 9 ಹೊಸ ಸಾಮಾನ್ಯ ಸಾರಿಗೆಯ ಕೆಂಪು ಬಸ್ಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗಕ್ಕೆ ಬರಲಿದ್ದು, ಇದರಲ್ಲಿ ಪುತ್ತೂರು, ಬಿ.ಸಿ.ರೋಡ್, ಧರ್ಮಸ್ಥಳ ಮತ್ತು ಮಡಿಕೇರಿ ಡಿಪೋಗಳಿಗೆ ತಲಾ 2 ಮತ್ತು ಸುಳ್ಯಕ್ಕೆ 1 ಬಸ್ ನೀಡಲು ನಿರ್ಧರಿಸಲಾಗಿದೆ. ಮಹಿಳೆಯರಿಗೆ ಉಚಿತ ಯೋಜನೆ ಬಂದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಇಳಿಸಲು ಒತ್ತಾಯ ಕೇಳಿಬಂದಿತ್ತು.
ಪಲ್ಲಕ್ಕಿ ನಾನ್ ಎ.ಸಿ. ಸ್ಲೀಪರ್ ಬಸ್ ಆಗಿದ್ದು, 30 ಸ್ಲೀಪರ್ ಬರ್ತ್ ಹೊಂದಿದೆ. ಪ್ರತೀ ಸ್ಲೀಪರ್ನಲ್ಲಿ ಮೊಬೈಲ್ ಹೋಲ್ಡರ್, ಮೊಬೈಲ್ ಚಾರ್ಜರ್, ಪಾದರಕ್ಷೆ ಇಡುವ ವ್ಯವಸ್ಥೆ ಹೊಂದಿದೆ. ಎಮೆರ್ಜೆನಿ ಅಲರ್ಟ್ ವ್ಯವಸ್ಥೆ ಇದೆ. ಆಡಿಯೋ ಮೂಲಕ ಪ್ರಯಾಣಿಕರಿಗೆ ಮಾಹಿತಿ ನೀಡುವ ಮತ್ತು ಪ್ರಯಾಣಿಕರಿಂದ ಮಾಹಿತಿ ಪಡೆಯುವ ಸೌಕರ್ಯವಿದೆ. ಸೀಟ್ ನಂಬರ್ ಮೇಲೆ ಎಲ್ಇಡಿ ಬೆಳಕು, ಡಿಜಿಟಲ್ ಗಡಿಯಾರ, ಎಲ್ಇಡಿ ಫ್ಲೋರ್ ಮುಂತಾದ ಸವಲತ್ತುಗಳಿವೆ. ಚಾಲಕನಿಗೆ ನೆರವಾಗುವ ಅತ್ಯಾಧುನಿಕ ಬ್ಯಾಕ್ ಕ್ಯಾಮೆರಾವೂ ಇದೆ.
ಕೆಎಸ್ಆರ್ಟಿಸಿ ರಾಜ್ಯದಲ್ಲಿ 40 ಪಲ್ಲಕ್ಕಿ ಉತ್ಸವ ಬಸ್ಗಳನ್ನು ಖರೀದಿ ಮಾಡಿದೆ. ಈ ಪೈಕಿ ಒಟ್ಟು 12ಕ್ಕೂ ಅಧಿಕ ಮಾರ್ಗಗಳಲ್ಲಿ ಈ ಬಸ್ಗಳು ಸಂಚಾರ ನಡೆಸಲಿವೆ. ಪ್ರಮುಖವಾಗಿ ಬೆಂಗಳೂರಿನಿಂದ ಮಂಗಳೂರು, ಉತ್ತರ ಕನ್ನಡ, ಹೊಸಪೇಟೆ, ಬೆಳಗಾವಿ, ಮಂತ್ರಾಲಯ, ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸಲಿವೆ. ಮಂಗಳೂರಿನಿಂದ ಮಂತ್ರಾಲಯ, ಬೆಂಗಳೂರಿಗೆ, ದಾವಣಗೆರೆಯಿಂದ ಮಂಗಳೂರು, ಕಲಬುರಗಿಗೆ ಈ ಪಲ್ಲಕ್ಕಿ ಉತ್ಸವ ಬಸ್ಳ ಸೌಲಭ್ಯ ನೀಡಲಾಗಿದೆ.
The Karnataka State Road Transport Corporation (KSRTC) has rolled out a new bus service called ‘Pallaki’ which falls in the non-AC sleeper variant of state run buses. A total of 40 Pallaki buses were flagged off by Karnataka CM Siddaramaiah on Saturday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm