ಬ್ರೇಕಿಂಗ್ ನ್ಯೂಸ್
13-10-23 11:01 pm Mangalore Correspondent ಕರಾವಳಿ
ಮಂಗಳೂರು, ಅ.13: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ.
ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.
ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.
Bjp state president Nalin Kumar Kateel has said that he has information that rs 42 crore in cash seized from the house of a contractor in Bengaluru was brought to pay commission.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm