ಬ್ರೇಕಿಂಗ್ ನ್ಯೂಸ್
13-10-23 11:01 pm Mangalore Correspondent ಕರಾವಳಿ
ಮಂಗಳೂರು, ಅ.13: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ.
ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.
ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.
Bjp state president Nalin Kumar Kateel has said that he has information that rs 42 crore in cash seized from the house of a contractor in Bengaluru was brought to pay commission.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am