ಬ್ರೇಕಿಂಗ್ ನ್ಯೂಸ್
13-10-23 11:01 pm Mangalore Correspondent ಕರಾವಳಿ
ಮಂಗಳೂರು, ಅ.13: ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದ 42 ಕೋಟಿ ರೂಪಾಯಿ ನಗದು ಕಮಿಷನ್ ನೀಡಲು ತಂದಿಟ್ಟಿದ್ದ ಹಣ ಎಂಬ ಮಾಹಿತಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ರೂ. ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಅಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ.
ಇದು ತೆಲಂಗಾಣದ ಚುನಾವಣೆಗೆ ಸಂಗ್ರಹಿಸಲಾದ ಹಣ ಎನ್ನಲಾಗುತ್ತಿದೆ. ಕೆಲವು ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರಕಾರ ಅಂದಿದ್ದೆವು ಎಂದರು.
ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಸಾಕ್ಷಿ ಇದು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿಯವರು ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡುವುದಿಲ್ಲ. ಗುತ್ತಿಗೆದಾರರಿಗೆ ಅನುದಾನ ಬಿಡುಗಡೆಯಾದ ಬೆನ್ನಲ್ಲೇ ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.
ಇದೊಂದು ಭ್ರಷ್ಟಾಚಾರಿಗಳ ಬೆಂಗಾವಲಿಗಿರುವ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಅವರು, ಇಡೀ ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಟರೂ ರೈತರಿಗೆ ಕರೆಂಟ್ ಇಲ್ಲ ಎಂದು ಕಿಡಿ ಕಾರಿದರು.
Bjp state president Nalin Kumar Kateel has said that he has information that rs 42 crore in cash seized from the house of a contractor in Bengaluru was brought to pay commission.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm