ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm