ಬ್ರೇಕಿಂಗ್ ನ್ಯೂಸ್
17-10-23 11:07 pm Mangalore Correspondent ಕರಾವಳಿ
ಮಂಗಳೂರು, ಅ.17: ನಗರದ ಫಳ್ನೀರ್ ನಲ್ಲಿ ಎಂಎಫ್ ಸಿ ಆಹಾರ ಮಳಿಗೆಯ ಮೇಲೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದು, 24 ಗಂಟೆಯಲ್ಲಿ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆಗಳನ್ನು ಹಾಜರುಪಡಿಸದೇ ಇದ್ದರೆ ಕೇಂದ್ರಕ್ಕೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಎಂಎಫ್ ಸಿ ಮಳಿಗೆಯಿರುವ ಕಟ್ಟಡದ ಮಾಲಕರ ದೂರಿನಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಧಿಕಾರಿಗಳು ಒಳಗೆ ಬರುತ್ತಿದ್ದಂತೆ ಮಳಿಗೆಯ ಮಾಲಕರು ತಡೆದು ತೀವ್ರ ಜಟಾಪಟಿ ನಡೆಸಿದ್ದಾರೆ. ನಾವು ತಪಾಸಣೆ ನಡೆಸುವುದಕ್ಕೆ ಆಗಮಿಸಿದ್ದು ಎಂದು ಅಧಿಕಾರಿಗಳು ಹೇಳಿದರೆ, ಹೊಟೇಲ್ ಮಾಲಕರು ಒಳಗೆ ಬಂದು ತಪಾಸಣೆ ನಡೆಸುವುದಕ್ಕೆ ಬಿಡಲ್ಲ ಎಂದು ತಡೆದಿದ್ದಾರೆ. ನಾವು ಎಲ್ಲ ಲೈಸನ್ಸ್ ಇದ್ದುಕೊಂಡೇ ವ್ಯವಹಾರ ನಡೆಸುತ್ತಿದ್ದೇವೆ. ಹೊಟೇಲ್ ಒಳಗಡೆ ಉತ್ತಮ ಸೌಲಭ್ಯವನ್ನೂ ಹೊಂದಿದ್ದೇವೆ ಎಂದು ಮಾಲಕ ಸಿದ್ದಿಕ್ ಹೇಳಿದ್ದು ಅಧಿಕಾರಿ ಸಿಬಂದಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.


ನಮ್ಮ ಆಹಾರ ಮಳಿಗೆ ಯಾವುದೇ ಕಾನೂನು ಉಲ್ಲಂಘಿಸಿಲ್ಲ. ನಾವು ಟ್ರೇಡ್ ಲೈಸನ್ಸ್ ಗಾಗಿ ಸಲ್ಲಿಸಿರುವ ಅರ್ಜಿಯನ್ನು ಇಲಾಖೆಯಿಂದ ನಿರಾಕರಿಸಿಯೂ ಇಲ್ಲ. 2017ರಿಂದ ಇದೇ ಜಾಗದಲ್ಲಿ ನಾವು ಬಿಸಿನೆಸ್ ಹೊಂದಿದ್ದೇವೆ. ಈಗ ಅಧಿಕಾರಿಗಳು ಕೆಲವು ಬಾಡಿಗೆ ಗೂಂಡಾಗಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾರೆ. ಯಾರಿಂದಲೋ ಲಂಚ ಪಡೆದು ದಾಳಿಗೆ ಬಂದಿದ್ದಾರೆ ಎಂದು ಎನ್.ಎಂ.ಎ ಸಿದ್ದಿಕ್ ಆರೋಪ ಮಾಡಿದ್ದಾರೆ. ಕೊನೆಗೆ, 24 ಗಂಟೆಯ ಗಡುವು ಕೊಡುತ್ತೇವೆ, ಸೂಕ್ತ ಟ್ರೇಡ್ ಲೈಸನ್ಸ್ ಇನ್ನಿತರ ದಾಖಲೆ ಪತ್ರಗಳನ್ನು ಇಲಾಖೆಗೆ ಹಾಜರುಪಡಿಸಬೇಕು ಎಂದು ಹೇಳಿ ಅಧಿಕಾರಿಗಳು ಹೊರ ನಡೆದಿದ್ದಾರೆ.
Food department sleuths have raided a food outlet called MFC FOOD MART running business at Falnir without a trade license. The owners of the outlet have expressed anguish at the attitude of the officials who had to return after inspecting the hygiene maintained at the outlet.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm