ಬ್ರೇಕಿಂಗ್ ನ್ಯೂಸ್
19-10-23 10:36 pm Mangalore Correspondent ಕರಾವಳಿ
ಮಂಗಳೂರು, ಅ.19: ಮಂಗಳಾದೇವಿ ದೇವಸ್ಥಾನದ ಸಂತೆ ವ್ಯಾಪಾರದ ವಿಚಾರದಲ್ಲಿ ಹಿಂದುಗಳನ್ನು ಎತ್ತಿ ಕಟ್ಟಿದ ಆರೋಪದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದರು. ಆದರೆ, ಕೇಸು ದಾಖಲಾದ 24 ಗಂಟೆಯಲ್ಲೇ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಅ.16ರಂದು ಮಂಗಳಾದೇವಿ ದೇವಸ್ಥಾನ ಆವರಣದಲ್ಲಿ ಹಿಂದು ವ್ಯಾಪಾರಿಗಳ ಅಂಗಡಿಗಳಿಗೆ ಕೇಸರಿ ಧ್ವಜ ಕಟ್ಟಿದ್ದ ಶರಣ್ ಪಂಪ್ವೆಲ್ ಮತ್ತು ಬಜರಂಗದಳ ಕಾರ್ಯಕರ್ತರು, ಹಿಂದುಗಳು ಹಿಂದು ವ್ಯಾಪಾರಿಗಳಿಂದಲೇ ಖರೀದಿ, ವಹಿವಾಟು ನಡೆಸಬೇಕು ಎಂದು ಕರೆ ನೀಡಿದ್ದರು. ಇದೇ ರೀತಿ ಮಾಧ್ಯಮಕ್ಕೆ ಹೇಳಿಕೆಯನ್ನೂ ನೀಡಿದ್ದರು. ಮುಜರಾಯಿ ಇಲಾಖೆಯ ದೇವಸ್ಥಾನ ಪರಿಸರದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲವೆಂಬ ನಿಯಮ ಇರುವುದರಿಂದ ಅದೇ ನೀತಿ ಅನುಸರಿಸಿ ಬಜರಂಗದಳ ನಾಯಕರು ಈ ಹೇಳಿಕೆ ನೀಡಿದ್ದರು.
ಆದರೆ ಹಿಂದುಗಳನ್ನು ಧ್ರುವೀಕರಿಸುವ ರೀತಿಯ ಹೇಳಿಕೆ ನೀಡಿದ್ದನ್ನು ಮತ್ತು ಮಂಗಳಾದೇವಿ ದೇವಸ್ಥಾನದ ಸಂತೆ ವ್ಯಾಪಾರದಲ್ಲಿ ಮುಸ್ಲಿಮರನ್ನು ದೂರವಿಡಲು ಯತ್ನಿಸಿದ್ದನ್ನು ಕಮ್ಯುನಿಸ್ಟ್ ಸೇರಿ ಜಾತ್ಯತೀತ ಪಕ್ಷಗಳ ನಾಯಕರು ವಿರೋಧಿಸಿದ್ದರು. ಅ.18ರಂದು ಮಂಗಳೂರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಈ ಬಗ್ಗೆ ದೂರು ಕೊಟ್ಟು ಶರಣ್ ಪಂಪ್ವೆಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆನಂತರ, ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದ ಸಚಿವರು ಯಾವುದೇ ಕೋಮು ದ್ವೇಷಕ್ಕೆ ಆಸ್ಪದ ನೀಡದಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸಂಜೆ ಐದು ಗಂಟೆ ವೇಳೆಗೆ ಪಾಂಡೇಶ್ವರ ಠಾಣೆ ಎಸ್ಐ ಮನೋಹರ್ ನೀಡಿದ ದೂರಿನಂತೆ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಾಗಿತ್ತು. ಸೆಕ್ಷನ್ 153 ಎ ಅಡಿಯಲ್ಲಿ ಜನ, ವರ್ಗ, ಸಮುದಾಯಗಳ ನಡುವೆ ದ್ವೇಷ ಹಬ್ಬಿಸಿದ್ದಾರೆಂದು ಆರೋಪಿಸಿ ಜಾಮೀನು ರಹಿತ ಕೇಸು ದಾಖಲಿಸಿದ್ದರು. ಈ ಸೆಕ್ಷನ್ ಪ್ರಕಾರ ಆರೋಪಿಗಳನ್ನು ಯಾವುದೇ ಸಂದರ್ಭದಲ್ಲಿ ಅರೆಸ್ಟ್ ಮಾಡುವುದಕ್ಕೆ ಅವಕಾಶ ಇರುತ್ತದೆ.

ಕೇಸು ದಾಖಲಾದ ಕೂಡಲೇ ಬೆಂಗಳೂರಿನಲ್ಲಿ ವಕೀಲರಾಗಿರುವ ಪುತ್ತೂರು ಮೂಲದ ಅರುಣ್ ಶ್ಯಾಮ್ ಹೈಕೋರ್ಟಿನಲ್ಲಿ ಅಪೀಲು ಮಾಡಿದ್ದಾರೆ. ಅ.19ರಂದು ಬೆಳಗ್ಗೆ ಹೈಕೋರ್ಟಿನಲ್ಲಿ ಪಿಟಿಶನ್ ಫೈಲ್ ಆಗಿದ್ದು ಸಂಜೆಯ ವೇಳೆಗೆ ನ್ಯಾಯಮೂರ್ತಿ ಟಿಜಿ ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ಪೀಠ, ಪೊಲೀಸರು ಹಾಕಿದ್ದ ಎಫ್ಐಆರ್ ಗೆ ತಡೆ ವಿಧಿಸಿದೆ. ಅಲ್ಲದೆ, 153ಎ ಸೆಕ್ಷನ್ ಅಡಿ ಕೇಸು ದಾಖಲಿಸಬೇಕಾದ ಅನಿವಾರ್ಯತೆ ಬಗ್ಗೆ ಪೊಲೀಸ್ ಅಧಿಕಾರಿಗಳೇ ಬಂದು ಸ್ಪಷ್ಟನೆ ನೀಡುವಂತೆ ಪೊಲೀಸರಿಗೆ ನೋಟೀಸ್ ಜಾರಿ ಮಾಡಿದೆ.
ರಾಜಕೀಯ ಪ್ರೇರಿತವಾಗಿ ಮತ್ತು ಶರಣ್ ಪಂಪ್ವೆಲ್ ಅವರ ಘನತೆ ಕುಂದಿಸುವ ಉದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವರು ಯಾವುದೇ ಸಾರ್ವಜನಿಕ ಸಭೆಯಲ್ಲಿ ಈ ಹೇಳಿಕೆ ನೀಡಿಲ್ಲ. ಹೇಳಿಕೆ ಕೊಟ್ಟು ಎರಡು ದಿನ ಕಳೆದಿದ್ದರೂ, ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜಾಮೀನು ರಹಿತ ಕೇಸು ದಾಖಲಿಸಿ ಮನೋ ಸ್ಥೈರ್ಯ ಕುಂದಿಸುವ ಯತ್ನ ಮಾಡಿದ್ದಾರೆ. ಈ ರೀತಿ ಎಫ್ಐಆರ್ ದಾಖಲಿಸುವ ಅಗತ್ಯ ಇರಲಿಲ್ಲ. ಹೀಗಾಗಿ ಈ ಕುರಿತ ಎಫ್ಐಆರ್ ವಿಧಿಸಿರುವುದಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಕೇಳಿಕೊಂಡಿದ್ದರು. ಪ್ರಕರಣದ ಬಗ್ಗೆ ಪೊಲೀಸ್ ಅಧಿಕಾರಿಗಳು ಹೈಕೋರ್ಟಿಗೆ ಹಾಜರಾಗಿ ಸ್ಪಷ್ಟ ವಿವರಣೆ ನೀಡದೇ ಇದ್ದರೆ, ಎಫ್ಐಆರ್ ರದ್ದಾಗುವ ಸಾಧ್ಯತೆ ಹೆಚ್ಚಿದೆ ಎಂದು ಅರುಣ್ ಶ್ಯಾಮ್ ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
Mangalore FIR Filed against Sharan Pumpwel gets stay order in High court over Mangaladevi temple row.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am