ಬ್ರೇಕಿಂಗ್ ನ್ಯೂಸ್
21-10-23 04:54 pm Mangalore Correspondent ಕರಾವಳಿ
ಉಳ್ಳಾಲ, ಅ.21: ಉಳ್ಳಾಲದಲ್ಲಿ ನಿನ್ನೆ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪನ್ನ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್ ಎಂಬಾತನನ್ನು ಕಾರು ಸಮೇತ ಲಾಕ್ ಮಾಡಿದ್ದಾರೆ. ತಲೆಮರೆಸಿಕೊಂಡ ಮತ್ತಿಬ್ಬರಿಗಾಗಿ ಶೋಧ ಮುಂದುವರಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನ ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುವಿರಾ ಎಂದು ಶಮೀರನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪನ್ನು ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ ಶಮೀರ್ ಉಳ್ಳಾಲ ಠಾಣೆಗೆ ಬಂದು ದೂರು ನೀಡಿದ್ದಾರೆ.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
Mangalore PWD engineer stabbed, car laptop robbed, Ullal police quick action, accused arrested within hours.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm