ಬ್ರೇಕಿಂಗ್ ನ್ಯೂಸ್
21-10-23 04:54 pm Mangalore Correspondent ಕರಾವಳಿ
ಉಳ್ಳಾಲ, ಅ.21: ಉಳ್ಳಾಲದಲ್ಲಿ ನಿನ್ನೆ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪನ್ನ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್ ಎಂಬಾತನನ್ನು ಕಾರು ಸಮೇತ ಲಾಕ್ ಮಾಡಿದ್ದಾರೆ. ತಲೆಮರೆಸಿಕೊಂಡ ಮತ್ತಿಬ್ಬರಿಗಾಗಿ ಶೋಧ ಮುಂದುವರಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನ ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುವಿರಾ ಎಂದು ಶಮೀರನ್ನ ಯಾಮಾರಿಸಿದ ಹಸೈನಾರ್ ಗುತ್ತಿಗೆದಾರನ ಕಾರನ್ನೇರಿ ಅಬ್ಬಕ್ಕ ಸರ್ಕಲ್ ಕಡೆ ತೆರಳಿದ್ದಾನೆ. ಅಬ್ಬಕ್ಕ ಸರ್ಕಲ್ ಬಳಿ ಹಸೈನಾರನ ಮತ್ತಿಬ್ಬರು ಸಹಚರರಾದ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಎಂಬಿಬ್ಬರು ಕಾರು ಹತ್ತಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ಎಂಬಲ್ಲಿ ಕಾರು ತಲುಪುತ್ತಿದ್ದಂತೆ ಶಮೀರ್ ಕಾಲಿಗೆ ಆರೋಪಿಗಳು ಚಾಕುವಿನಿಂದ ಇರಿದು ಹಲ್ಲೆಗೈದು ಹಣ ಸಿಗದಾಗ ಕಾರು, ಲ್ಯಾಪ್ ಟಾಪನ್ನು ದರೋಡೆಗೈದಿದ್ದಾರೆ. ರೌಡಿಗಳಿಂದ ತಪ್ಪಿಸಿದ ಶಮೀರ್ ಉಳ್ಳಾಲ ಠಾಣೆಗೆ ಬಂದು ದೂರು ನೀಡಿದ್ದಾರೆ.

ಎಸಿಪಿ ಧನ್ಯಾ ನಾಯಕ್ ಸೂಚನೆಯಂತೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಬಾಲಕೃಷ್ಣ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರೌಡಿ ಹಸೈನಾರನ್ನ ಮಧ್ಯರಾತ್ರಿಯೇ ಬಂಧಿಸಿದೆ. ದರೋಡೆ ಮಾಡಿದ ಕಾರು, ಲ್ಯಾಪ್ ಟಾಪ್, ಕೃತ್ಯಕ್ಕೆ ಬಳಸಿದ ಚಾಕುವನ್ನ ದಸ್ತಗಿರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ರೌಡಿ ಶೀಟರ್ ಉಮರ್ ನವಾಬ್ ಮತ್ತು ಅಕ್ಬರ್ ಉಳ್ಳಾಲ್ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.
Mangalore PWD engineer stabbed, car laptop robbed, Ullal police quick action, accused arrested within hours.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm