ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.
ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
08-07-25 10:15 am
Mangalore Correspondent
ಎಂಟು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ; ಪ್ರೀತಿಸುತ...
07-07-25 05:02 pm
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
07-07-25 10:31 pm
Mangalore Correspondent
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm