ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.
ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm