ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am