ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm