ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm