ಬ್ರೇಕಿಂಗ್ ನ್ಯೂಸ್
22-10-23 02:33 pm Mangaluru Correspodent ಕರಾವಳಿ
ಬೆಳ್ತಂಗಡಿ, ಅ.22: ಯುದ್ಧ ಪೀಡಿತ ಇಸ್ರೇಲ್ ದೇಶದಲ್ಲಿ ಶಾಂತಿ ನೆಲೆಸಲೆಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನ ಒಂದರಲ್ಲಿ ವಿಶೇಷ ಪೂಜೆ ನಡೆಸಿದ್ದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ.
ನವರಾತ್ರಿ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿರುವ ಭಾರತೀಯರು ಮತ್ತು ಕರಾವಳಿಯ ಸಾವಿರಾರು ಮಂದಿಯ ಜೀವಕ್ಕೆ ವಿಘ್ನ ಬಾರದಂತೆ ಬೆಳ್ತಂಗಡಿ ತಾಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಸೇರಿ ನವರಾತ್ರಿ ರಂಗಪೂಜೆ ನೆರವೇರಿಸಿದ್ದಾರೆ. ದೇವಸ್ಥಾನದಲ್ಲಿ ದೀಪ ಹಚ್ಚಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮರೋಡಿ ನಾರಾಯಣ ಪೂಜಾರಿ ಮತ್ತು ಕುಟುಂಬಸ್ಥರು ಸೇರಿ ರಂಗಪೂಜೆ ಮಾಡಿದ್ದಾರೆ.



ಇಸ್ರೇಲ್ ದೇಶದಲ್ಲಿ ಮರೋಡಿ ಗ್ರಾಮದ ಹಲವಾರು ಮಂದಿಯಿದ್ದು ಊರಿನ ಜನರು ಕ್ಷೇಮವಾಗಿ ಮರಳಿ ಬರಲೆಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ನಮ್ಮೂರಿನ ಅನೇಕ ಜನರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಇಸ್ರೇಲ್ ನಲ್ಲಿ ಯುದ್ಧ ನಿಲ್ಲಬೇಕು, ಸಾವು ನೋವು ಕಡಿಮೆ ಆಗಬೇಕು. ಅಮಾಯಕರು ಬಲಿಯಾಗೋದು ನಿಲ್ಲಬೇಕು ಎಂದು ಊರವರು ಸೇರಿ ರಂಗ ಪೂಜೆ ಮಾಡಿದ್ದೇವೆ. ನಮ್ಮೂರಿನ ಹಲವರು ಇಸ್ರೇಲ್ ನಲ್ಲಿದ್ದು ತಾಯ್ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲಿ ದುಡಿದು ನಮ್ಮ ದೇಶದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗಾಗಿ ಆ ದೇಶದಲ್ಲಿ ಯುದ್ಧ ನಿಂತರೆ ನಮ್ಮ ದೇಶಕ್ಕೂ ಒಳ್ಳೇದು, ನಮ್ಮ ಊರಿಗೂ ಒಳ್ಳೇದು.
ನಾವೂ ಇಸ್ರೇಲ್ ನಲ್ಲಿ ದುಡಿದಿದ್ದೇವೆ, ನಮಗೂ ಆ ದೇಶದ ಮೇಲೆ ಅಭಿಮಾನವಿದೆ. ಆ ಕಾರಣಕ್ಕೋಸ್ಕರ ಇಸ್ರೇಲ್ ನಲ್ಲಿ ಶಾಂತಿ ನೆಲೆಸಲು ದೇವರಿಗೆ ಪೂಜೆ ನೆರವೇರಿಸಿ ಪ್ರಾರ್ಥಿಸಿದ್ದೇವೆ ಎಂದು ಮರೋಡಿ ನಿವಾಸಿ ನಾರಾಯಣ ಪೂಜಾರಿ ಉಚ್ಚೂರು ಹೇಳಿದ್ದಾರೆ
Mangalore Villagers offer special pooja and prayers at a temple in Belthangady for peace with Israel.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm