ಬ್ರೇಕಿಂಗ್ ನ್ಯೂಸ್
23-10-23 06:33 pm Mangalore Correspondent ಕರಾವಳಿ
ಮಂಗಳೂರು, ಅ.23: ಸ್ವಚ್ಛತೆ ಕಾಪಾಡದೆ ಬೇಕಾಬಿಟ್ಟಿಯಾಗಿ ಮಟ್ಕಾ ಸೋಡಾ ಮಾರಾಟ ಮಾಡುತ್ತಿದ್ದ ಕುದ್ರೋಳಿ ದೇವಸ್ಥಾನ ಬಳಿಯ ನವರಾತ್ರಿ ಉತ್ಸವದ ಸ್ಟಾಲ್ ಗೆ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ದ್ವಾರದ ಬಳಿಯಲ್ಲೇ ಹಿಂದಿ ಮಾತನಾಡುತ್ತಿರುವ ವ್ಯಾಪಾರಿಗಳು ಮಟ್ಕಾ ಸೋಡಾ ಸ್ಟಾಲ್ ಹಾಕಿದ್ದರು. ಸ್ಟಾಲ್ ನಲ್ಲಿ ರಾತ್ರಿ ವೇಳೆ ಭರಪೂರ ವ್ಯಾಪಾರ ನಡೆಯುತ್ತಿದ್ದ ವೇಳೆ ಗ್ರಾಹಕರೊಬ್ಬರು ಅಲ್ಲಿನ ದುಸ್ಥಿತಿ ಬಗ್ಗೆ ವಿಡಿಯೋ ಮಾಡಿದ್ದರು. ಮಟ್ಕಾ ಪಾಟ್ ಗಳನ್ನು ತೊಳೆಯುತ್ತಿದ್ದ ನೀರು ತೀರಾ ಕಪ್ಪು ಕಪ್ಪಗೆ ಆಗಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಅಲ್ಲದೆ, ಸ್ಟಾಲ್ ಸಿಬಂದಿ ತಂಬಾಕು ಜಗಿದು ಅಲ್ಲಿಯೇ ಉಗುಳುತ್ತಿದ್ದರು. ಅದನ್ನು ಬಾಯಿಂದ ತೆಗೆದು ಕೈತೊಳೆದ ನೀರಿನಲ್ಲೇ ಮಟ್ಕಾ ಪಾಟ್ ಗಳನ್ನು ತೊಳೆಯುತ್ತಿದ್ದರು. ಆ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ, ಶುಚಿತ್ವ ಇಲ್ಲದ ಮಟ್ಕಾ ಸೋಡಾ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು.


ವಿಡಿಯೋ ವೈರಲ್ ಬೆನ್ನಲ್ಲೇ ಸೋಮವಾರ ಮಧ್ಯಾಹ್ನ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಮಟ್ಕಾ ಸೋಡಾ ಸ್ಟಾಲ್ ನಲ್ಲಿದ್ದ ಪಾಟ್ ಸೇರಿ ಎಲ್ಲ ವಸ್ತುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದು ಶುಚಿತ್ವ ಕಾಪಾಡದೆ ಸ್ಟಾಲ್ ಗಳನ್ನು ಹಾಕದಂತೆ ತಾಕೀತು ಮಾಡಿದ್ದಾರೆ.


ಕುದ್ರೋಳಿ ನವರಾತ್ರಿ ಉತ್ಸವಕ್ಕೆ ಬಹಳಷ್ಟು ಸ್ಟಾಲ್ ಗಳನ್ನು ಹಾಕಿದ್ದು ಇತರೇ ಸ್ಟಾಲ್ ಗಳಲ್ಲೂ ಶುಚಿತ್ವ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಆದರೆ ಈ ರೀತಿ ಶುಚಿತ್ವ ಇಲ್ಲದ ಸ್ಟಾಲ್ ಮಂಗಳೂರಿನ ಬಹಳಷ್ಟು ಕಡೆ ಇದ್ದು ಪಾಲಿಕೆ ಅಧಿಕಾರಿಗಳು ಕುರುಡರ ರೀತಿ ವರ್ತಿಸುತ್ತಾರೆ. ಕರಾವಳಿ ಉತ್ಸವ ಮೈದಾನದಲ್ಲಿ ಹಣ ಕೊಟ್ಟು ವಸ್ತು ಪ್ರದರ್ಶನ, ಅಕ್ವೇರಿಯಂ ನೋಡಲು ಹೋಗುವ ಜಾಗದಲ್ಲು ಅಂಥದ್ದೇ ವೈಪರೀತ್ಯ ಇದೆ. ಒಳಗಡೆ ತಿಂಡಿ ಸ್ಟಾಲ್ ಗಳನ್ನು ಹಾಕಿದ್ದು ವಾಕರಿಕೆ ಬರುವಂತಿದೆ. ಮಂಗಳೂರಿನ ಜನರು ಪ್ರಶ್ನೆ ಮಾಡುವುದನ್ನೇ ಬಿಟ್ಟಿದ್ದರಿಂದ ಎಲ್ಲೆಲ್ಲಿಂದ ಬಂದು ಇಲ್ಲಿ ಬೇಕಾಬಿಟ್ಟಿ ತಿಂಡಿ, ತಿನಿಸಿನ ಸ್ಟಾಲ್ ಹಾಕುತ್ತಿದ್ದಾರೆ. ಇದಕ್ಕೆಲ್ಲ ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಗಾಗ್ಗೆ ದಾಳಿ ನಡೆಸಿ ಮೂಗುದಾರ ಹಾಕಬೇಕಿದೆ. ಎಲ್ಲೋ ವಿಡಿಯೋ ಬಂದಾಗ ಮಾತ್ರ ಎಚ್ಚತ್ತುಕೊಳ್ಳುವುದಲ್ಲ..
Matka Soda cup washed in ditry water and served at Kurdoli Dasara, MCC raid in Mangalore.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm