ಬ್ರೇಕಿಂಗ್ ನ್ಯೂಸ್
23-10-23 08:41 pm HK, Udupi Correspondent ಕರಾವಳಿ
ಉಡುಪಿ, ಅ.23: ಬಿಜೆಪಿ ಸರ್ಕಾರ ಇದ್ದಾಗ ತರಾತುರಿಯಲ್ಲಿ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ಮಾಡಿತ್ತು. ಕಾಂಗ್ರೆಸ್ ಸರಕಾರ ಬರುತ್ತಿದ್ದಂತೆ, ಅಲ್ಲಿ ಪರಶುರಾಮನ ನಕಲಿ ಮೂರ್ತಿ ಸ್ಥಾಪಿಸಿದ್ದಾರೆ ಎಂಬ ಆರೋಪ ಬಂದಿತ್ತು. ಒಂದಷ್ಟು ಮಂದಿ ನಕಲಿ ಮೂರ್ತಿ ಬಗ್ಗೆ ತನಿಖೆಗಾಗಿ ಗೋಗರೆದು ಉಪವಾಸ ಸತ್ಯಾಗ್ರಹವನ್ನೂ ಮಾಡಿದ್ರು. ಕೊನೆಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೂರ್ತಿ ಅರ್ಧ ನಕಲಿ, ಅರ್ಧ ಅಸಲಿ ಎಂದು ಕಾಗೆ ಹಾರಿಸಿ ಹೋಗಿದ್ದರು.
ಇದರ ಮಧ್ಯೆ ಎರಡು ವಾರಗಳ ಹಿಂದೆ ದಿಢೀರ್ ಆಗಿ ಪರಶುರಾಮನ ಮೂರ್ತಿಯೇ ನಾಪತ್ತೆ ಆಗಿತ್ತು. ಪ್ರವಾಸೋದ್ಯಮ ಇಲಾಖೆಯಾಗಲೀ, ಕಾಮಗಾರಿ ಉಸ್ತುವಾರಿ ಹೊಂದಿದ್ದ ನಿರ್ಮಿತಿ ಕೇಂದ್ರ ಆಗಲಿ ಮೂರ್ತಿ ಎಲ್ಲಿದೆ, ಯಾಕಾಗಿ ತೆರವು ಮಾಡಿದ್ದಾರೆ ಎನ್ನೋದ್ರ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರಂತೂ ಜನಸಾಮಾನ್ಯರು ಹುಚ್ಚರು ಅನ್ನುವಂತೆ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ನಾಯಕರು ಎಂಎಲ್ಸಿ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಸತ್ಯಶೋಧನೆಗೆ ಹೋಗಿದ್ದಾಗ, ಮೂರ್ತಿಯ ಕೆಳಗಿನ ಭಾಗದಲ್ಲಿ ರಟ್ಟು, ಫೈಬರ್ ಇರೋದನ್ನು ನೋಡಿ ಹರಿದು ಹಾಕಿದ್ದರು. ಇದರ ಫೋಟೋ, ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ತಮ್ಮದೊಂದು ಸತ್ಯಶೋಧನೆ ಮಾಡಿ ವಿಡಿಯೋ ಮಾಡಿದ್ದರು.
v
ಮೂರ್ತಿಯ ಕಾಲು, ಪಾದ, ತೊಡೆಯ ಭಾಗಕ್ಕೆ ಸುತ್ತಿಗೆಯಲ್ಲಿ ಹೊಡೆದು ಕಂಚಿನದ್ದೇ ಎಂದು ಸಾಬೀತು ಮಾಡಲು ಹೊರಟಿದ್ದರು. ಸುತ್ತಿಗೆಯಲ್ಲಿ ಹೊಡೆಯುವಾಗಲೇ ಕಾಲಿನಲ್ಲಿ ಹಾಕಿದ್ದ ರಿಂಗ್ ಮಾತ್ರ ಟೈಂ ಎಂದು ಸದ್ದು ಮಾಡಿತ್ತು. ಉಳಿದೆಲ್ಲವೂ ಡಬ, ಡಬ ಸದ್ದು ಉಸುರಿದ್ದೇ ಅದು ಕಂಚಿನದ್ದಲ್ಲ ಎಂದು ಸಾರಿ ಹೇಳುವಂತಿತ್ತು. ಆದರೆ ಬಿಜೆಪಿ ಕಾರ್ಯಕರ್ತರು ಮಾತ್ರ ಇದು ಕಂಚಿನದ್ದೇ, ಇಷ್ಟು ಹೊಡೆದರೂ ಏನೂ ಆಗಿಲ್ಲ. ಯಾರು ಕೂಡ ಬಂದು ಪರಿಶೀಲನೆ ಮಾಡಿ ಎಂದು ಸವಾಲು ಹಾಕುವ ರೀತಿ ವಿಡಿಯೋ ಮಾಡಿ ಹಂಚಿದ್ದರು. ಇದರೊಂದಿಗೆ ಫೇಸ್ಬುಕ್ ಮತ್ತು ಇತರ ಜಾಲತಾಣಗಳಲ್ಲಿ ಪರಶುರಾಮನ ಮೂರ್ತಿ ವಿಚಾರ ಬೆಂಕಿ ಹೊತ್ತಿಸಿಕೊಂಡಿತ್ತು.
ಬೆಂಕಿ, ರೋಷ ತಾರಕಕ್ಕೆ ಏರುತ್ತಲೇ ತಾನು ಮಾಡಿದ್ದೇ ಸರಿ ಎನ್ನುವಂತೆ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾರ್ಕಳದ ಬಿಜೆಪಿ ಕಚೇರಿಯಲ್ಲಿ ಘಂಟೆ ನಾದ ಎಬ್ಬಿಸುವ ರೀತಿ ಭಾಷಣ ಮಾಡಿದ್ದಾರೆ. ಅದು ಪರಶುರಾಮನ ಮೂರ್ತಿ ಅಷ್ಟೇ. ಅಪಮಾನ ಆಗುವುದಕ್ಕೆ ಧಾರ್ಮಿಕ ಸಂಕೇತ ಅಲ್ಲ. ಪ್ರವಾಸೋದ್ಯಮ ಬೆಳೆಯಬೇಕು ಅನ್ನುವ ದೃಷ್ಟಿಯಿಂದ, ಜನಾಕರ್ಷಣೆ ಉದ್ದೇಶದಿಂದ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಅಷ್ಟೇ. ಅಲ್ಲಿ ಚಪ್ಪಲಿ ಹಾಕಿದರೂ ಚಿಂತೆ ಇಲ್ಲ, ಅದರಲ್ಲಿ ಧರ್ಮ, ಸಂಸ್ಕೃತಿ ವಿಚಾರ ಬರುವುದಿಲ್ಲ ಏನೋ ಹೊಸ ಶೋಧದ ರೀತಿ ಹೇಳಿಕೊಂಡಿದ್ದಾರೆ. ಆದರೆ ಮೂರ್ತಿ ನಕಲಿಯೇ, ಅಸಲಿಯೇ, ಕಂಚಿನದ್ದು ಅಲ್ಲವೇ ಅನ್ನುವ ಪ್ರಶ್ನೆ ಬಗ್ಗೆ ತುಟಿ ಬಿಚ್ಚಿಲ್ಲ. ಒಬ್ಬ ಶಾಸಕನಾಗಿ ತನಗೆ ಬೇಕಾದ ರೀತಿ ಮಾತನಾಡಿದ್ದು, ತಪ್ಪನ್ನು ಮುಚ್ಚಿ ಹಾಕಲು ಕಾರ್ಯಕರ್ತರನ್ನು ಛೂಬಿಟ್ಟು ಏನೆಲ್ಲ ಕಸರತ್ತು ಮಾಡೋದು, ಅದರಲ್ಲಿ ರಾಜಕೀಯ ಮಾಡೋದು ಓಕೆ.
ಇತ್ತ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸಿಗೆ, ಅದರ ನಾಯಕರಿಗೆ ಏನಾಗಿದೆ ? ಪರಶುರಾಮನ ಕಂಚಿನ ಮೂರ್ತಿ ಹೆಸರಲ್ಲಿ ಒಂದೆರಡಲ್ಲ 14 ಕೋಟಿ ರೂಪಾಯಿ ಸಾರ್ವಜನಿಕ ದುಡ್ಡನ್ನು ಲೂಟಿ ಮಾಡುವ ಯೋಜನೆಯ ಬಗ್ಗೆ ಏನೂ ಆಗಿಯೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಇಷ್ಟೆಲ್ಲ ರಾದ್ಧಾಂತ ಮಾಡಿದ್ರೂ ಜಿಲ್ಲಾ ಉಸ್ತುವಾರಿ ಆಗಲೀ, ರಾಜ್ಯದ ಜವಾಬ್ದಾರಿ ಹೊತ್ತವರಾಗಲೀ ಮೌನದಲ್ಲೇ ಇದ್ದಾರೆ. ಇವರ ಮೌನ ನೋಡಿದರೆ, ಅಲ್ಲಿ ಆಗಿರುವ ಭ್ರಷ್ಟಾಚಾರದಲ್ಲಿ ಇವರಿಗೂ ಪಾಲು ಇದೆಯಾ ಅನ್ನುವ ಅನುಮಾನ ಬರುವಂತಿದೆ. ಆಡಳಿತ ಪಕ್ಷವಾಗಿ ಸ್ಥಳೀಯ ಶಾಸಕರ ಎದುರಾಳಿಯಾಗಿದ್ದರೂ ಕಾಂಗ್ರೆಸ್ ನಾಯಕರು ಒಳ ಒಪ್ಪಂದ ಮಾಡಿರುವ ರೀತಿ ತನಿಖೆಯನ್ನೂ ಮಾಡದೆ ಮೌನಕ್ಕೆ ಶರಣಾಗಿದ್ದು, ನಕಲಿ ಮೂರ್ತಿಯನ್ನು ಪ್ರತಿಷ್ಠೆ ಮಾಡಿ ಜನರನ್ನು ಮೂರ್ಖರನ್ನಾಗಿಸಿದರೂ ಎಫ್ಐಆರ್ ದಾಖಲಿಸದೆ ಮೌನವಾಗಿದ್ದು ಇವರದ್ದೆಲ್ಲ ನಾಟಕ ಅನ್ನುವುದಕ್ಕೆ ತಜ್ಞ ಬರಬೇಕಾಗಿಲ್ಲ. ನಕಲಿ ಎಂದಾಗಿದ್ದರೆ, ಮೊದಲು ಎಫ್ಐಆರ್ ದಾಖಲಿಸಿ ತನಿಖೆಗೆ ಕೊಡಬೇಕಿತ್ತು. ಅದಕ್ಕೆ ಯಾರೆಲ್ಲ ಹೊಣೆ ಅನ್ನೋದನ್ನು ನೋಡಿ ಸಸ್ಪೆಂಡ್ ಮಾಡಬೇಕಿತ್ತು. ಅದು ಯಾವುದನ್ನೂ ಮಾಡಿಲ್ಲ ಎಂದರೆ, ಇವರದ್ದು ಮುಚ್ಚಿ ಹಾಕುವ ನಾಟಕ ಎನ್ನಬೇಕಷ್ಟೇ.
ವಿರೋಧ ಮಧ್ಯೆಯೇ ಮೂರ್ತಿ ನಿಲ್ಲಿಸಿದ್ದ ಶಾಸಕ ;
ಪರಶುರಾಮನನ್ನು ತುಳುನಾಡಿನ ಸೃಷ್ಟಿಕರ್ತನೆಂದು ವಾದಿಸುವ ಮಂದಿ ಇದ್ದಾರೆ. ಅದನ್ನು ಸುಳ್ಳು ಎಂದು ಹೇಳಿ ವಾದಿಸುವ ಮಂದಿಯೂ ತುಳುನಾಡಿನಲ್ಲಿದ್ದಾರೆ. ಜನಪದ ಹಿನ್ನೆಲೆಗಿಂತ ವಿಭಿನ್ನವಾಗಿರುವ ಮಹಾಬ್ರಾಹ್ಮಣ ಪರಶುರಾಮನ ಕತೆಯನ್ನು ವೈದಿಕರು ಜನರ ಮೇಲೆ ಹೇರಿದ್ದಾರೆ ಎನ್ನುವ ಮಂದಿ ಕಳೆದ ಬಾರಿ ಪರಶುರಾಮನ ಮೂರ್ತಿ ಪ್ರತಿಷ್ಠೆ ವಿಚಾರ ಬಂದಾಗಲೇ ವಿರೋಧ ವ್ಯಕ್ತಪಡಿಸಿದ್ದರು. ತುಳುನಾಡಿನ ದೈವಗಳನ್ನು ಕೆಳಕ್ಕೆ ತಳ್ಳಿ ಅದರ ಮೇಲೆ ಮೂರ್ತಿ ಪ್ರತಿಷ್ಠೆ ಮಾಡಲಾಗಿದೆ ಎಂದೂ ದೂರಿದ್ದರು. ವೈರುಧ್ಯ, ವಾದ- ವಿವಾದಗಳ ನಡುವೆ ತರಾತುರಿಯಲ್ಲಿ ಪರಶುರಾಮನ ಮೂರ್ತಿ ಎದ್ದು ನಿಂತಿತ್ತು. ಅಷ್ಟೇ ತರಾತುರಿ ಎನ್ನುವಂತೆ 2023ರ ಜನವರಿ ಕೊನೆಯಲ್ಲಿ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ಲೋಕಾರ್ಪಣೆ ಮಾಡಲಾಗಿತ್ತು.
ವಿಪರ್ಯಾಸ ಅಂದ್ರೆ, ಲೋಕಾರ್ಪಣೆ ಆಗಿದ್ದು ಬಿಟ್ಟರೆ ಈ ಪ್ರವಾಸೋದ್ಯಮ ಕೇಂದ್ರವನ್ನು ಜನರಿಗೆ ಸರಿಯಾಗಿ ನೋಡುವುದಕ್ಕೇ ಬಿಡಲಿಲ್ಲ. ಬೇಸಗೆಯಲ್ಲಿ ಜನರು ಒಮ್ಮೆಲೇ ಮುಗಿಬಿದ್ದ ಬೆನ್ನಲ್ಲೇ ಏನೋ ನೆಪವೊಡ್ಡಿ ಬಂದ್ ಮಾಡಲಾಗಿತ್ತು. ಆನಂತರ, ಮಳೆಗಾಲದಲ್ಲಿ ಅದೇನೋ ತೊಂದರೆ ಇದೆಯೆಂದು ಬಂದ್ ಮಾಡಿದ್ದರು. ಈಗ ಮತ್ತೆ ಸ್ವಲ್ಪ ಕೆಲಸ ಬಾಕಿಯಿದೆ ಎಂದು ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಕೇಂದ್ರಕ್ಕೆ ಬೀಗ ಜಡಿಯಲಾಗಿದೆ. ಥೀಮ್ ಪಾರ್ಕ್ ಒಳ್ಳೆಯ ಪರಿಕಲ್ಪನೆಯೇ ಆಗಿದ್ದರೂ, ಕಂಚಿನದ್ದೆಂದು ಹೇಳುತ್ತ ನಕಲಿಯನ್ನು ತೋರಿಸಿ ಮೋಸ ಮಾಡಿದ್ದು ಅಕ್ಷಮ್ಯ ಅನ್ನಲೇಬೇಕು. ಮೂರ್ತಿ ಹೆಸರಲ್ಲಿ ತಿಂದು ತೇಗಿದವರನ್ನೂ ಮತ್ತೆ ಕಕ್ಕಿಸುವ ಕೆಲಸವೂ ಆಗಬೇಕು. ಪಕ್ಷದ ಶಾಸಕರೇ ಇಲ್ಲ ಎಂದು ಕರಾವಳಿ ಬಗ್ಗೆ ಅಸಡ್ಡೆ ಹೊಂದಿರುವ ಸಿದ್ದರಾಮಯ್ಯ ಈ ಬಗ್ಗೆ ಇನ್ನಾದ್ರೂ ಎಚ್ಚರಗೊಳ್ಳುತ್ತಾರಾ ನೋಡಬೇಕು.
Karkala Parashurama Theme Park controversy: Why Congress is not ready to file an FIR or probe against Sunil Kumar. Even though there is a Congress government in the state, even after so many rumours and disputes, the Congress is still not ready to file an FIR or probe former minister and Karkala MLA Sunil Kumar. Parashurama theme park has ignited a heated dispute between the Congress and the BJP.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am