ಬ್ರೇಕಿಂಗ್ ನ್ಯೂಸ್
25-10-23 10:28 am Mangalore Correspondent ಕರಾವಳಿ
ಉಳ್ಳಾಲ, ಅ.25: ಮಂಗಳೂರು ದಸರಾಕ್ಕೆ ತೆರಳುವ ಧಾವಂತದಲ್ಲಿದ್ದ ಬೈಕ್ ಸವಾರನೋರ್ವ ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ತೊಕ್ಕೊಟ್ಟು ಸಮೀಪದ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಲಖಮಾಪುರ ನಿವಾಸಿ ಎಲ್ಲವ್ವ ದೊಡ್ಡಮನಿ (50) ಮೃತ ಮಹಿಳೆ. ಮೃತ ಎಲ್ಲವ್ವ ಅವರ ಪತಿ ಶಿವಪ್ಪ ಅವರು ಕೂಲಿ ಕಾರ್ಮಿಕರಾಗಿದ್ದು ಸಾಯಂಕಾಲದ ವೇಳೆ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ಸೆಕ್ಯುರಿಟಿ ವೃತ್ತಿ ನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಬಾದಾಮಿಯಿಂದ ಪತ್ನಿ ಎಲ್ಲವ್ವ ಬಂದು ಪತಿ ಜೊತೆಗೆ ತಂಗಿದ್ದರು. ಮಂಗಳವಾರ ಸಂಜೆ 8 ಗಂಟೆ ಸುಮಾರಿಗೆ ಮನೆಯ ವಿರುದ್ಧ ದಿಕ್ಕಿನಲ್ಲಿರುವ ಅಂಗಡಿಗೆ ದಿನಸಿ ಖರೀದಿಗೆ ತೆರಳಿದ್ದ ಎಲ್ಲವ್ವ ಅವರು ಮತ್ತೆ ಮನೆಗೆ ವಾಪಸಾಗಲು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ದೈಗೋಳಿ ನಿವಾಸಿ ಗಗನ್ ಎಂಬಾತನ ಬೈಕ್ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಯಲ್ಲೇ ಜಾರಿಕೊಂಡು ದೂರಕ್ಕೆ ಕ್ರಮಿಸಿ ರಸ್ತೆ ವಿಭಜಕಕ್ಕೆ ಗುದ್ದಿ ನಿಂತಿದೆ. ಬೈಕಿನಲ್ಲಿದ್ದ ಸವಾರ ಗಗನ್ ಹಾಗೂ ಇನ್ನೋರ್ವನಿಗೆ ಗಾಯವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Accident, Woman dies after bike rams her while crossing road at Thokottu.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm