ಬ್ರೇಕಿಂಗ್ ನ್ಯೂಸ್
25-10-23 12:34 pm Mangalore Correspondent ಕರಾವಳಿ
ಮಂಗಳೂರು, ಅ.25: ಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಯಲ್ಲಿ ಧರ್ಮಸ್ಥಳದ ಸೌಜನ್ಯಾ ಫೋಟೊ ಹಾಕಿದ್ದ ಟ್ಯಾಬ್ಲೋವನ್ನು ನಡುರಸ್ತೆಯಲ್ಲಿ ನಿಲ್ಲಿಸಿ, ಸಂಚಾರಕ್ಕೆ ಅವಕಾಶ ನೀಡದೆ ಹಿಂದಕ್ಕೆ ಕಳಿಸಿದ ಪ್ರಸಂಗ ನಡೆದಿದೆ.
ದೇವಿ ಮಹಾತ್ಮೆ ಕಥಾನಕ ಬಿಂಬಿಸುವ ಚಿತ್ರಣದ ಸ್ತಬ್ಧಚಿತ್ರವನ್ನು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ನೇತೃತ್ವದಲ್ಲಿ ಮಾಡಲಾಗಿತ್ತು. ಟ್ಯಾಬ್ಲೋ ಎದುರಿನಲ್ಲಿ ಸೌಜನ್ಯಾ ಫೋಟೊ ಹಾಕಲಾಗಿತ್ತು. ಆದರೆ ಟ್ಯಾಬ್ಲೋ ರೆಡಿಯಾಗಿ ಬರುತ್ತಿದ್ದಂತೆ ಉರ್ವಾದಲ್ಲಿಯೇ ಪೊಲೀಸರು ಅಡ್ಡಹಾಕಿದ್ದಾರೆ. ಕೇಳಿದರೆ, ಕ್ಷೇತ್ರದ ಆಡಳಿತ ಅವಕಾಶ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸನ್ನ ರವಿ ಮತ್ತು ಜೊತೆಗಿದ್ದವರು ಕ್ಷೇತ್ರದ ಕಚೇರಿಗೆ ತೆರಳಿದಾಗ, ಅಲ್ಲಿದ್ದ ಸಮಿತಿ ಪದಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡದೆ ನುಣುಚಿಕೊಂಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ಅವರು, ಇಲ್ಲಿ ರಾಜಕೀಯ ಮಾಡಲು ಅವಕಾಶ ಇಲ್ಲ ಎಂದು ಹೇಳಿ ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಸನ್ನ ರವಿ, ನಮಗೆ ಪೊಲೀಸರು ಅವಕಾಶ ನಿರಾಕರಿಸಿಲ್ಲ. ಎಸಿಪಿಯವರು ನಮಗೆ ಪರವಾನಗಿ ನೀಡಿದ್ದರು. ಇವರೇ ಉದ್ದೇಶಪೂರ್ವಕ ಅಡ್ಡ ಹಾಕಿದ್ದಾರೆ. ಇವರಿಗೆ ಸೌಜನ್ಯಾ ಫೋಟೊ ಹಾಕಿದ ಮಾತ್ರಕ್ಕೆ ಏನು ತೊಂದರೆ ಆಗತ್ತೆ. ಅದರಲ್ಲಿ ಯಾವ ರಾಜಕೀಯ ಇದೆ. ಯಾರ್ಯಾರದ್ದೋ ಪುಂಡು ಪೋಕರಿಗಳ, ಸ್ಪಾನ್ಸರ್ ಕೊಟ್ಟವರ ಫೋಟೊ ಹಾಕುತ್ತಾರೆ. ನವರಾತ್ರಿ ಸಂದರ್ಭದಲ್ಲಿ ಇವರು ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪೊಲೀಸರು ಒಂದು ಹಂತದಲ್ಲಿ ಸೌಜನ್ಯಾ ಹೆತ್ತವರು, ಪ್ರತಿಭಟನೆಯ ಫೋಟೊ ಮುಚ್ಚುವಂತೆ ಹೇಳಿದ್ದರು. ಅದಕ್ಕೆ ಒಪ್ಪಿದ್ದ ಟ್ಯಾಬ್ಲೋದವರು ಫೋಟೊ ಕಾಣದಂತೆ ಪರದೆ ಮುಚ್ಚಿ ಹೋಗಲು ಮುಂದಾಗಿದ್ದರು. ಆದರೆ ಕೊನೆಯಲ್ಲಿ ಟ್ಯಾಬ್ಲೋ ಸಂಚಾರಕ್ಕೆ ಅವಕಾಶವನ್ನೇ ನೀಡಲಿಲ್ಲ.
Kudroli dasara 2023, Soujanya banner in tablo, stopped by police, prasanna ravi slams leaders in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am