ಬ್ರೇಕಿಂಗ್ ನ್ಯೂಸ್
25-10-23 12:34 pm Mangalore Correspondent ಕರಾವಳಿ
ಮಂಗಳೂರು, ಅ.25: ಕುದ್ರೋಳಿ ಕ್ಷೇತ್ರದ ದಸರಾ ಮೆರವಣಿಗೆಯಲ್ಲಿ ಧರ್ಮಸ್ಥಳದ ಸೌಜನ್ಯಾ ಫೋಟೊ ಹಾಕಿದ್ದ ಟ್ಯಾಬ್ಲೋವನ್ನು ನಡುರಸ್ತೆಯಲ್ಲಿ ನಿಲ್ಲಿಸಿ, ಸಂಚಾರಕ್ಕೆ ಅವಕಾಶ ನೀಡದೆ ಹಿಂದಕ್ಕೆ ಕಳಿಸಿದ ಪ್ರಸಂಗ ನಡೆದಿದೆ.
ದೇವಿ ಮಹಾತ್ಮೆ ಕಥಾನಕ ಬಿಂಬಿಸುವ ಚಿತ್ರಣದ ಸ್ತಬ್ಧಚಿತ್ರವನ್ನು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ನೇತೃತ್ವದಲ್ಲಿ ಮಾಡಲಾಗಿತ್ತು. ಟ್ಯಾಬ್ಲೋ ಎದುರಿನಲ್ಲಿ ಸೌಜನ್ಯಾ ಫೋಟೊ ಹಾಕಲಾಗಿತ್ತು. ಆದರೆ ಟ್ಯಾಬ್ಲೋ ರೆಡಿಯಾಗಿ ಬರುತ್ತಿದ್ದಂತೆ ಉರ್ವಾದಲ್ಲಿಯೇ ಪೊಲೀಸರು ಅಡ್ಡಹಾಕಿದ್ದಾರೆ. ಕೇಳಿದರೆ, ಕ್ಷೇತ್ರದ ಆಡಳಿತ ಅವಕಾಶ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸನ್ನ ರವಿ ಮತ್ತು ಜೊತೆಗಿದ್ದವರು ಕ್ಷೇತ್ರದ ಕಚೇರಿಗೆ ತೆರಳಿದಾಗ, ಅಲ್ಲಿದ್ದ ಸಮಿತಿ ಪದಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡದೆ ನುಣುಚಿಕೊಂಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ಅವರು, ಇಲ್ಲಿ ರಾಜಕೀಯ ಮಾಡಲು ಅವಕಾಶ ಇಲ್ಲ ಎಂದು ಹೇಳಿ ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಸನ್ನ ರವಿ, ನಮಗೆ ಪೊಲೀಸರು ಅವಕಾಶ ನಿರಾಕರಿಸಿಲ್ಲ. ಎಸಿಪಿಯವರು ನಮಗೆ ಪರವಾನಗಿ ನೀಡಿದ್ದರು. ಇವರೇ ಉದ್ದೇಶಪೂರ್ವಕ ಅಡ್ಡ ಹಾಕಿದ್ದಾರೆ. ಇವರಿಗೆ ಸೌಜನ್ಯಾ ಫೋಟೊ ಹಾಕಿದ ಮಾತ್ರಕ್ಕೆ ಏನು ತೊಂದರೆ ಆಗತ್ತೆ. ಅದರಲ್ಲಿ ಯಾವ ರಾಜಕೀಯ ಇದೆ. ಯಾರ್ಯಾರದ್ದೋ ಪುಂಡು ಪೋಕರಿಗಳ, ಸ್ಪಾನ್ಸರ್ ಕೊಟ್ಟವರ ಫೋಟೊ ಹಾಕುತ್ತಾರೆ. ನವರಾತ್ರಿ ಸಂದರ್ಭದಲ್ಲಿ ಇವರು ಸೌಜನ್ಯಾಗೆ ದ್ರೋಹ ಮಾಡಿದ್ದಾರೆ. ಅತ್ಯಾಚಾರಿಗಳ ಪರ ನಿಂತಿದ್ದಾರೆ. ಇವರಿಗೆ ಆ ಶಿವನೇ ಮುನಿಯುತ್ತಾನೆ. ಜನಾರ್ದನ ಪೂಜಾರಿ ಹಿಂದಿನಂತೆ ಇರುತ್ತಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪೊಲೀಸರು ಒಂದು ಹಂತದಲ್ಲಿ ಸೌಜನ್ಯಾ ಹೆತ್ತವರು, ಪ್ರತಿಭಟನೆಯ ಫೋಟೊ ಮುಚ್ಚುವಂತೆ ಹೇಳಿದ್ದರು. ಅದಕ್ಕೆ ಒಪ್ಪಿದ್ದ ಟ್ಯಾಬ್ಲೋದವರು ಫೋಟೊ ಕಾಣದಂತೆ ಪರದೆ ಮುಚ್ಚಿ ಹೋಗಲು ಮುಂದಾಗಿದ್ದರು. ಆದರೆ ಕೊನೆಯಲ್ಲಿ ಟ್ಯಾಬ್ಲೋ ಸಂಚಾರಕ್ಕೆ ಅವಕಾಶವನ್ನೇ ನೀಡಲಿಲ್ಲ.
Kudroli dasara 2023, Soujanya banner in tablo, stopped by police, prasanna ravi slams leaders in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm