ಬ್ರೇಕಿಂಗ್ ನ್ಯೂಸ್
12-11-20 02:51 pm Udupi Correspondent ಕರಾವಳಿ
ಉಡುಪಿ, ನ.12: ಮಾಜಿ ಸಚಿವ ಬಸನಗೌಡ ಯತ್ನಾಳ್ ಸರಕಾರಕ್ಕೆ ಮುಜುಗರ ತರುವ ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ್ರಮ ತೆಗೆದುಕೊಳ್ಳುವ ಮಾತನಾಡಿದ್ದಾರೆ.
ಉಡುಪಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರು ಕೂಡ ಪಕ್ಷದ ಸೀಮಿತ, ನಿಯಮಗಳನ್ನು ಮೀರಿ ವರ್ತನೆ ಮಾಡಬಾರದು. ಈ ಬಗ್ಗೆ ಪಕ್ಷದ ವಿಚಾರ, ಸಿದ್ಧಾಂತ ಹಾಗೂ ನಿಯಮದ ಆಧಾರದಲ್ಲಿ ಮಾತುಕತೆ ಮಾಡಿದ್ದೇವೆ. ಅವರ ವಿರುದ್ಧ ಪಕ್ಷದ ಒಳಗೆ ಏನು ತೀರ್ಮಾನ ತೆಗೆದುಕೊಳ್ಳಬೇಕು ಅದನ್ನು ಕೈಗೊಂಡಿದ್ದೇವೆ ಎಂದಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿಗೆ ಸಂಬಂಧಿಸಿ ಸಂಪತ್ರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ತನಿಖೆಯಲ್ಲೂ ಸಂಪತ್ ರಾಜ್ ಕೈವಾಡ ಇರುವುದು ಸಂಪೂರ್ಣ ಬಹಿರಂಗ ಆಗಿದೆ. ಸಂಪತ್ರಾಜ್ ನಾಪತ್ತೆಯಾಗಿದ್ದು ಅದರ ಬಗ್ಗೆ ಕಾಂಗ್ರೆಸ್ ಪಕ್ಷ ಉತ್ತರ ಕೊಡಬೇಕಾಗಿದೆ ಎಂದು ಅವರು ಹೇಳಿದರು.
ಡಿಕೆಶಿಗೆ ನೈತಿಕತೆ ಇದ್ದರೆ ಸಂಪತ್ರಾಜ್ಗೆ ಶರಣಾಗುವಂತೆ ಹೇಳಬೇಕು. ಸಂಪತ್ ರಾಜ್ ತಪ್ಪಿಸಿಕೊಳ್ಳುವುದರ ಹಿಂದೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಪ್ರಭಾವ ಇದೆ. ಸಂಪತ್ ರಾಜ್ನನ್ನು ಸರಕಾರ ಬಂಧನ ಮಾಡಲೇಬೇಕು ಎಂದು ನಳಿನ್ ಒತ್ತಾಯಿಸಿದರು.

ಉಪಚುನಾವಣೆ ಸೋಲಿಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಕಾರಣ ಎಂಬುದಾಗಿ ಕಾರ್ಯಕರ್ತರು ಹೈಕಮಾಂಡಿಗೆ ಪತ್ರ ಬರೆದಿರುವುದು ಬಹಿರಂಗ ಆಗಿದೆ. ಆರ್.ಆರ್. ನಗರ ಸೋಲಬೇಕು ಎಂಬುದಾಗಿ ಸಿದ್ದರಾಮಯ್ಯ, ಶಿರಾ ಸೋಲಬೇಕು ಎಂಬುದಾಗಿ ಡಿಕೆಶಿ ಒಳರಾಜಕಾರಣ ಮಾಡಿದ್ದಾರೆ. ಇದು ಬಿಜೆಪಿಗೆ ಲಾಭ ಆಗಿದೆ. ಈ ವಿಚಾರ ಕಾರ್ಯಕರ್ತರಿಗೆ ಗೊತ್ತಾಗಿ ಅಸಮಾಧಾನ ಭುಗಿಲೆದ್ದಿದೆ ಎಂದು ಅವರು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆಯೇ ಅಥವಾ ಸರ್ಜರಿಯೇ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಕರಾವಳಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಬಹುದೇ ಅಥವಾ ಕಳೆದುಕೊಳ್ಳಬಹುದೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಲು ಮತ್ತು ರಾಜ್ಯದ ಹಿತದೃಷ್ಠಿಯಿಂದ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ನಮಗಿಂತ ಹಿರಿಯರಾಗಿದ್ದು ಅವರಿಗೆ ನಾವು ಸಲಹೆ ನೀಡಬೇಕಾಗಿಲ್ಲ ಎಂದು ಹೇಳಿದರು.
Will take serious action against Basangouda Patil Yatnal said BJP state president Naleen Kumar Kateel at Udupi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am